ಮಂಗಳೂರು: ಎಡಪದವು ಮಹಾಶಕ್ತಿ ಕೇಂದ್ರದ ಪಂಚಾಯತ್ ವ್ಯಾಪ್ತಿಯ ವಿವಿದೆಡೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಸ್ಥಳೀಯ ಪ್ರಮುಖ ನಾಯಕರೊಂದಿಗೆ ಕಾರ್ಯಕರ್ತರ ಕಾರ್ನರ್ ಮೀಟಿಂಗ್ ನಡೆಸಿ ಮತಪ್ರಚಾರದ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.