ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬರಿಮಾರು ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರಲ್ಲಿ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಬಾರಿಯ ಚುನಾವಣೆಯಲ್ಲಿ ಗೆಲುವಿಗಾಗಿ ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚೆ ನಡೆಸಿದರು. ಬಿಜೆಪಿ ಅವಧಿಯಲ್ಲಿ ನಡೆದ ಅಭಿವೃದ್ಧಿಯನ್ನು ಕಂಡು ಹತಾಶ ಮನೋಭಾವ ಹೊಂದಿರುವ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಜಾತಿಜಾತಿಗಳ ಲೆಕ್ಕಾಚಾರ ಹಾಕಿಕೊಂಡು ಮನೆಮನೆಗೆ ಹೋಗಿ ಅಪಪ್ರಚಾರದಲ್ಲಿ ತೊಡಗಿದೆ. ಕ್ಷೇತ್ರದ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅವರ ಮತಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದು, ಕ್ಷೇತ್ರದ ಜನತೆ ಇವರ ಮೋಸದ ಜಾಲಕ್ಕೆ ಬೀಳುವುದಿಲ್ಲ ಎಂಬ ವಿಶ್ವಾಸ ನನಗಿದೆ.
ಬಿಜೆಪಿ ಪಕ್ಷದ ದೇವದುರ್ಲಭ ಕಾರ್ಯಕರ್ತರು ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸಿದ್ದು,ಪ್ರತಿಯೊಂದು ಮತವೂ ಬಿಜೆಪಿ ಪರವಾಗುವಂತೆ ಮಾಡುತ್ತಾರೆ ಎಂಬ ದೃಡವಿಶ್ವಾಸವಿದೆ ಎಂದು ತಿಳಿಸಿದರು.
ಚುನಾವಣೆವರೆಗೆ ಕೆಲವೇ ದಿನಗಳನ್ನು ಬಿಜೆಪಿ ಗೆಲುವಿಗಾಗಿ ಮೀಸಲಿಡಿ, ಮುಂದಿನ ಐದು ವರ್ಷಗಳ ಕಾಲ ಕ್ಷೇತ್ರದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕತೆಯಿಂದ ಗೌರವ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಬದ್ದನಿದ್ದೇನೆ ಎಂಬ ಭರವಸೆ ನೀಡುತ್ತೇನೆ ಎಂದರು.
ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಬರಿಮಾರು ಗ್ರಾ.ಪಂ.ಉಪಾಧ್ಯಕ್ಷ ಸದಾಶಿವ ಜಿ.ಗ್ರಾಮಪಂಚಾಯತ್ ಸದಸ್ಯರುಗಳಾದ ಜಗದೀಶ್, ವನಿತಾ ಎಲ್ ಕೆ. ಧರಣ್, ಪ್ರಮುಖರಾದ ಗಣೇಶ್ ರೈ ಮಾಣಿ, ಸುಬ್ರಹ್ಮಣ್ಯ ಭಟ್ ಬರಿಣಿಕರೆ, ಚಂದ್ರಶೇಖರ್ ಬಾಯಿಲ, ಸದಾನಂದ ಪೂಜಾರಿ, ಜಯಂತ ಪೂಜಾರಿ, ಶಿವಾನಂದ, ಹಂಸರಾಜ್ ಜೈನ್, ಮೋಹನ್ ಕುಮಾರ್ ಜೈನ್, ಪ್ರಭಾಕರ ಸುವರ್ಣ, ಸುಷ್ಮಾಮುಳಿಬೈಲು ಮತ್ತಿತರರು ಉಪಸ್ಥಿತರಿದ್ದರು.