ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಬೂತ್ ಸಂಖ್ಯೆ 90 ಇದರ ಕಾರ್ಯಕರ್ತ ವಸಂತ ಪೂಜಾರಿ ಮಜಲು ಅವರ ಮನೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ನೂರಾರು ಕಾರ್ಯಕರ್ತರ ಜೊತೆಯಲ್ಲಿ ನರೇಂದ್ರ ಮೋದಿಯವರ ಭಾಷಣ ವೀಕ್ಷಿಸಿದರು.
ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಬೂತು ಕಾರ್ಯಕರ್ತರಿಂದ ರಾಷ್ಟ್ರೀಯ ನಾಯಕರವರೆಗೆ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು, ಇದರ ಅಂಗವಾಗಿ ರಾಜ್ಯದಾದ್ಯಂತ ಎ.27 ರಂದು ಗುರುವಾರ ಬೆಳಿಗ್ಗೆ 9.30 ಗಂಟೆಗೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ವಿಶೇಷ ಕಾರ್ಯಕ್ರಮ ರಾಜ್ಯದಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡಿದ್ದಾರೆ. ಬಂಟ್ವಾಳ ಮಂಡಲದ 8 ಮಹಾಶಕ್ತಿ ಕೇಂದ್ರದ ಪ್ರಮುಖ ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಿ ಕಾರ್ಯಕ್ರಮದ ಆಯೋಜನೆ ಮಾಡಲಾಗಿತ್ತು.
ಎಲ್ಲಾ ಶಕ್ತಿ ಕೇಂದ್ರ ಬೂತುಗಳಲ್ಲಿಯೂ ಕಾರ್ಯಕರ್ತರು ನಮೋ ಆ್ಯಪ್, ಸರಳ ಆ್ಯಪ್, ಬಿಜೆಪಿ ಆನ್ಲೈನ್, ಯೂಟ್ಯೂಬ್ ಬಳಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.