ಮಂಗಳೂರು: ಕಾಂಗ್ರೆಸ್ ಬೆಂಬಲಿತ ಸದಸ್ಯೆಯ ಸದಸ್ಯತ್ವ ರದ್ದುಗೊಂಡ ಕಾರಣಕ್ಕೆ ಹಳೆಯಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮಿಥುನ್ ರೈ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.
ಹಳೆಯಂಗಡಿ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಸಮಬಲ ಸದಸ್ಯತ್ವ ಇದ್ದು, ಕಾಂಗ್ರೆಸ್ ಬೆಂಬಲಿತ ಸದಸ್ಯೆಯ ಸದಸ್ಯತ್ವ ರದ್ದುಗೊಂಡಿತ್ತು. ಈ ಕಾರಣದಿಂದ ಬಿಜೆಪಿ ಬೆಂಬಲಿತರು ಜಯಗಳಿಸಿದ್ದರು. ಇದೇ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು ಮತ್ತು ಮಿಥುನ್ ರೈ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.