Categories: ಮಂಗಳೂರು

ಎಸ್ಸಿ- ಎಸ್ಟಿ ಸೇರಿ ಎಲ್ಲ ಮೀಸಲಾತಿಯನ್ನು ತೆಗೆದುಹಾಕಲು ಬಿಜೆಪಿ ಸರ್ಕಾರ ಹೊರಟಿದೆ- ಯುಟಿ ಖಾದರ್

ಮಂಗಳೂರು: ಎಸ್ಸಿ- ಎಸ್ಟಿ ಸೇರಿ ಎಲ್ಲ ಮೀಸಲಾತಿಯನ್ನು ತೆಗೆದುಹಾಕಲು ಬಿಜೆಪಿ ಸರ್ಕಾರ ಹೊರಟಿದೆ. ಸಾಮಾಜಿಕ ನ್ಯಾಯ
ಗಾಳಿಗೆ ತೂರಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಇವರ ಗುರಿ. ನಾಲ್ಕು ವರ್ಷದ ಆಡಳಿತ ಅವಧಿಯ ಕೊನೆಯಲ್ಲಿ ಈ ರೀತಿ ಒಬ್ಬರ ಮೀಸಲಾತಿ ತೆಗೆದು ಇನ್ನೊಬ್ಬರಿಗೆ ಕೊಟ್ಟು ಗೊಂದಲ ಸೃಷ್ಟಿಸುವುದರ ಹಿಂದಿನ ಉದ್ದೇಶ ಏನು ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.

ಸುದ್ದಿಗೋಷ್ಟಿ ನಡೆಸಿದ ಅವರು, ಮೀಸಲಾತಿ ವಿರೋಧಿ ನೀತಿಯೇ ಬಿಜೆಪಿಯದ್ದು ಎರಡು ಬಿಗೆ ಸಂಬಂಧಿಸಿ ಮುಸ್ಲಿಮರ ಮೀಸಲಾತಿ ತೆಗೆದು ಇನ್ನೊಬ್ಬರಿಗೆ ಕೊಟ್ಟಿದ್ದಾರೆ. ಆಮೂಲಕ ಜನರನ್ನು ಮೋಸ ಮಾಡಿದ್ದಾರೆ. ಲಾಲಿಪಾಪ್, ಚಾಕ್ಲಟ್ ಕೊಟ್ಟ ರೀತಿ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ಇದರಿಂದ ಯಾರಿಗಾದರೂ ಪ್ರಯೋಜನ ಇದೆಯೇ ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್ ಆದೇಶ ಪ್ರಕಾರ, 50 ಪರ್ಸೆಂಟ್ ಗಿಂತ ಹೆಚ್ಚು ಮೀಸಲು ಕೊಡುವಂತಿಲ್ಲ. ಇದನ್ನು ಕಳೆದ ಡಿಸೆಂಬರ್ ನಲ್ಲಿ ಸಂಸತ್ತಿನಲ್ಲಿಯೂ ನಿರ್ಧರಿಸಲಾಗಿತ್ತು. ಈಗ ರಾಜ್ಯ ಸರಕಾರ ಎಸ್ಸಿ ಎಸ್ಟಿಗೆ ಮೀಸಲಾತಿ ಹೆಚ್ಚಿಸಿ ಮಾಡಿರುವ ಆದೇಶವೂ ಸಂಸತ್ತಿನಲ್ಲಿ ಊರ್ಜಿತಗೊಂಡು ಒಂಬತ್ತನೇ ಶೆಡ್ಯೂಲ್ ನಲ್ಲಿ ಸೇರ್ಪಡೆ ಮಾಡಬೇಕು. ಅದನ್ನು ಮಾಡಲು ಸಾಧ್ಯವಿಲ್ಲ. ಇದು ಗೊತ್ತಿದ್ದರೂ ಬಿಜೆಪಿ ನಾಟಕ ಮಾಡುತ್ತಿದೆ ಎಂದು ಖಾದರ್ ದೂರಿದರು.

ಮೀಸಲಾತಿ ಬಗ್ಗೆ ಗೊಂದಲ ಸೃಷ್ಟಿಸಿ ಇದನ್ನು ಪ್ರಶ್ನಿಸಿ ಯಾರಾದ್ರೂ ಕೋರ್ಟಿಗೆ ಹೋದಲ್ಲಿ ಎಲ್ಲರಿಗೂ ಮೀಸಲಾತಿ ಇಲ್ಲದಂತೆ ಮಾಡುವ ಹಿಡನ್ ಅಜೆಂಡಾ ಇದರ ಹಿಂದಿದೆ ಎಂದರು ಖಾದರ್‌, ಬಹಳಷ್ಟು ಕಡೆ ನೀರಿನ ಸಮಸ್ಯೆ ಆಗಿದೆ. ಚುನಾವಣೆ ನೀತಿಸಂಹಿತೆ ಜನಸಾಮಾನ್ಯರಿಗೆ ತೊಂದರೆ ಆಗುವಂತೆ ಇರಬಾರದು. ಚುನಾವಣೆ ಸಂದರ್ಭದಲ್ಲಿ ಶಾಸಕರಾಗಲೀ, ರಾಜಕೀಯ ನಾಯಕರು ಅಧಿಕಾರಿಗಳನ್ನು ಕರೆಸಿ ಕೆಲಸ ಮಾಡಿಸಲು ಸಾಧ್ಯವಾಗಲ್ಲ. ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸೂಕ್ತ ಅನುದಾನ ನೀಡಬೇಕು. ಅಲ್ಲದೆ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಯಾದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಡಳಿತ ಮಾಹಿತಿ ನೀಡಬೇಕು ಎಂದು ಖಾದರ್ ಒತ್ತಾಯಿಸಿದರು. ಧಾರ್ಮಿಕ ಕೇಂದ್ರಗಳ ಆಚರಣೆ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಖಾದರ್‌ ಹೇಳಿದರು ಅಲ್ಲದೆ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಯಾದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಡಳಿತ ಮಾಹಿತಿ ನೀಡಬೇಕು ಎಂದು ಖಾದರ್ ಒತ್ತಾಯಿಸಿದರು.

ಧಾರ್ಮಿಕ ಕೇಂದ್ರಗಳ ಆಚರಣೆ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಬೇಕು. ರಾಜಕೀಯ ನಾಯಕರು ಧಾರ್ಮಿಕ ಕೇಂದ್ರಗಳಲ್ಲಿ ಪಾಲ್ಗೊಳ್ಳುವಿಕೆಗೆ ಸಮಸ್ಯೆ ಇಲ್ಲ. ಅಲ್ಲಿ ಚುನಾವಣೆ ಪ್ರಚಾರ ಮಾಡಬಾರದು ಅಷ್ಟೆ. ಆದರೆ ಕೆಲವು ಅಧಿಕಾರಿಗಳು ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡದೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗೊಂದಲ ನಿವಾರಿಸಬೇಕು ಎಂದು ಹೇಳಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago