Categories: ಮಂಗಳೂರು

ರಮಾನಾಥ ರೈಗಳ ವಿರುದ್ಧ ಆರೋಪ ಮಾಡುವುದಕ್ಕೆ ಬಿಜೆಪಿಗರಿಗೆ ವಿಷಯಗಳಿಲ್ಲ- ಅಶ್ವನಿ ಕುಮಾರ್ ರೈ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ರಮಾನಾಥ ರೈ ಶುದ್ಧಹಸ್ತ ವ್ಯಕ್ತಿ. ಸರಳ, ಸಜ್ಜನಿಕೆಯ ಇವರ ವಿರುದ್ಧ ಆರೋಪ ಮಾಡಲೂ ಬಿಜೆಪಿಗರಿಗೆ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ, ಅವರ ವಿರುದ್ಧ ಸುಳ್ಳು ವದಂತಿಗಳನ್ನು ಹರಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಖ್ಯಾತ ನ್ಯಾಯವಾದಿ, ಕೆಪಿಸಿಸಿ ಮುಖಂಡ ಅಶ್ವನಿ ಕುಮಾರ್ ತಿಳಿಸಿದರು. ಅವರು ಪಲ್ಲಮಜಲುವಿನಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಂಟ್ವಾಳದಲ್ಲಿ ಶಾಂತಿಯಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಆಡಳಿತವಿರುವಾಗ ಬಂಟ್ವಾಳದ ಶಾಂತಿ ಕೆಡಿಸಿದವರು ಯಾರು ಎಂದೂ ಬಿಜೆಪಿಗರು ಹೇಳಬೇಕು. ಕಾಂಗ್ರೆಸಿಗರು ಯಾವುದೇ ಗಲಭೆ, ಹಿಂಸೆಯಲ್ಲಿ ಭಾಗಿಯಾದವರಲ್ಲ. ಬಂಟ್ವಾಳದಲ್ಲಿ ನಡೆದ ಹಿಂಸಾಚಾರಗಳಲ್ಲಿ ಒಬ್ಬನೇ ಒಬ್ಬ ಕಾಂಗ್ರೆಸ್ ಕಾರ್ಯಕರ್ತನ ಹೆಸರು ಆರೋಪಿಗಳ ಸ್ಥಾನದಲ್ಲಿಲ್ಲ. ಕಾಂಗ್ರೆಸ್ ಯಾವತ್ತೂ ಶಾಂತಿ ಮತ್ತು ಸೌಹಾರ್ಧತೆಯನ್ನು ಬಯಸುವ ಪಕ್ಷ. ಹೀಗಾಗಿ, ಕಳೆದ ಐದು ವರ್ಷದಲ್ಲಿ ಬಂಟ್ವಾಳದಲ್ಲಿ ಶಾಂತಿಯಿದೆ ಎಂದು ಅವರು ತಿಳಿಸಿದರು.

ಮಾಜಿ‌ ಸಚಿವ, ಕಾಂಗ್ರೇಸ್ ಅಭ್ಯರ್ಥಿ ರಮಾನಾಥ ರೈ ಮಾತನಾಡಿ, ಕಳೆದ ಚುನಾವಣೆಯಲ್ಲಿ ನನ್ನನ್ನು ಅಪಪ್ರಚಾರದಿಂದ ಸೋಲಿಸಲಾಯಿತು. ಸೋತ ಬಗ್ಗೆ ಬೇಸರವಿಲ್ಲ. ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನನ್ನ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನನಗೆ ಮತ್ತೊಮ್ಮೆ ಆಶೀರ್ವಾದ ಮಾಡಿ. ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿ ನನ್ನದೇ ಆದ ಕೆಲವೊಂದು ಕನಸುಗಳಿವೆ. ಆ ಕನಸುಗಳು ಪೂರ್ಣಗೊಂಡಿಲ್ಲ. ಇದು ನನ್ನ ಕೊನೆಯ ಚುನಾವಣೆ. ಮತ್ತೊಂದು ಅವಕಾಶ ನೀಡಿದರೆ, ಆ ಕನಸುಗಳನ್ನು ಪೂರ್ಣಗೊಳಿಸಲಿದ್ದೇನೆ ಎಂದು ಭರವಸೆ ನೀಡಿದರು.

ಪಲ್ಲಮಜಲು ಹಾಗೂ ಈ ಭಾಗ ಹಿಂದೆ ವಿಟ್ಲ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ 25 ವರ್ಷಕ್ಕೂ ಹೆಚ್ಚು ಅವಧಿಗೆ ಬಿಜೆಪಿಗರು ಜನಪ್ರತಿನಿಧಿಗಳಾಗಿದ್ದಾರೆ. ಕಾಂಗ್ರೆಸಿಗರು ಇಲ್ಲಿ ಅಧಿಕಾರದಲ್ಲಿದ್ದುದು ಅಲ್ಪ ಅವಧಿಗೆ ಮಾತ್ರ. ಆದರೂ ಇಲ್ಲಿ ಕಾಂಗ್ರೆಸ್ ನವರು ಏನು ಮಾಡಿದ್ದಾರೆ? ಎಂದು ಬಿಜೆಪಿಗರು ಕೇಳುತ್ತಾರೆ. ಇಲ್ಲಿ ಸುಸಜ್ಜಿತ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿದುದು ನಾನು ಶಾಸಕನಾದ ಬಳಿಕ ಮಾತ್ರ ಎಂದು ಅವರು ಸ್ಮರಿಸಿದರು.

ಕ್ಷೇತ್ರದಲ್ಲಿ ಒಂಬತ್ತನೇ ಬಾರಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಇಷ್ಟೊಂದು ಸುಧೀರ್ಘ ಅವಧಿಯಲ್ಲಿ ಜನಸೇವೆ ಮಾಡುವ ಅವಕಾಶ ಕಲ್ಪಿಸಿದ ನನ್ನ ಕ್ಷೇತ್ರದ ಜನತೆಯ ಋಣವನ್ನು ಜನ್ಮಜನ್ಮಾಂತರಕ್ಕೂ ಮರೆಯಲು ಸಾಧ್ಯವಿಲ್ಲ. ಆರು ಬಾರಿ ಶಾಸಕನಾಗಿದ್ದೇನೆ. ಜಿಲ್ಲೆಯಲ್ಲೇ ಅತಿಹೆಚ್ಚು ದೀರ್ಘಾವಧಿಗೆ ಸಚಿವನಾದ ಬಗ್ಗೆ ತೃಪ್ತಿಯಿದೆ. ನನ್ನ ಜನ ನನ್ನನ್ನು ಈ ಬಾರಿ ಕೈಬಿಡುವುದಿಲ್ಲ ಎಂಬ ದೃಢವಿಶ್ವಾಸದೊಂದಿಗೆ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ರೈ ತಿಳಿಸಿದರು.

ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರುಗಳಾದ ಬಿ.ಎಚ್. ಖಾದರ್, ರಾಕೇಶ್ ಮಲ್ಲಿ, ಸದಾಶಿವ ಬಂಗೇರ, ಅಬ್ಬಾಸ್ ಅಲಿ, ಬಿ., ಇಬ್ರಾಹೀಂ ಕೈಲಾರ, ಬಿ. ಮೋಹನ್, ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಪ್ರವೀಣ್ ಬಂಟ್ವಾಳ್, ಪಿ.ಎ. ರಹೀಂ, ಪ್ರೀತಿರಾಜ್ ದ್ರಾವಿಡ್, ಶಬೀರ್ ಸಿದ್ದಕಟ್ಟೆ, ಆನಂದ ಕುಲಾಲ್, ಬಶೀರ್ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಖರ್ಗೆ ಅವರು ಪ್ರಧಾನಮಂತ್ರಿಯಾಗುವ ಯೋಗ ಬಂದಿದೆ : ಎಮ್.ಬಿ.ಪಾಟೀಲ

ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಏರಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಬಸವಾದಿ ಶರಣರು ಬಯಸಿದರೆ ಪ್ರಧಾನಿಯಾಗಲಿದ್ದಾರೆ. ಅದರಿಂದ ಈ ಹೈದರಾಬಾದ್ ಕರ್ನಾಟಕ…

13 mins ago

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌…

22 mins ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…

30 mins ago

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

45 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

57 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

1 hour ago