News Karnataka Kannada
Friday, May 03 2024
ಮಂಗಳೂರು

ಬಡವರ ಬದುಕು ಕಸಿದ ಬಿಜೆಪಿ, ರಾಜಾರಾಂ ಬಿ.ಕೆ ಆಕ್ರೋಶ

Vijayapura: Three sitting MLAs confirmed of hand tickets, rest uncertain
Photo Credit : News Kannada

ಪುತ್ತೂರು: ಗ್ಯಾಸ್‌ ಸಿಲಿಂಡರ್‌, ಅಡುಗೆ ಎಣ್ಣೆ ಸೇರಿದಂತೆ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರ್ಕಾರದ ಜನಪ್ರತಿನಿಧಿಗಳು ಯಾವ ಮುಖ ಹೊತ್ತು ಮತಕೇಳಲು ಮನೆ ಮನೆಗೆ ಹೋಗುತ್ತಾರೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ರಾಜಾರಾಂ ಬಿ.ಕೆ ಹೇಳಿದರು.

ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ದೇಶದಲ್ಲಿ ಅಚ್ಛೇದಿನ್‌ ಕೊಡುವುದಾಗಿ ಬಡವರ ಜೀವನದ ಮೇಲೆ ಕಲ್ಲು ಹಾಕುವ ಕೆಲಸ ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ, ಅನಿಲ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್‌ ಜನಸ್ನೇಹಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹೀಗಾಗಿ ಪ್ರತಿ ಬೂತ್‌ನಲ್ಲಿ ಅಧಿಕ ವೋಟ್‌ ದೊರೆಯುವಂತೆ ಮಾಡಬೇಕು ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪ್ರವೀಣ್‌ ಚಂದ್ರ ಆಳ್ವ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು