ಬೆಳ್ತಂಗಡಿ: ಜವಹರ್ಲಾಲ್ ನೆಹರೂರವರು ಪ್ರಧಾನಿಯಾದ ನಂತರ ಆಧುನಿಕ ಭಾರತವನ್ನು ಸೃಷ್ಠಿಸಿದರು. ಇಂದಿರಾ ಗಾಂಧಿಯವರು ಆರ್ಥಿಕ ಶಕ್ತಿಯನ್ನು ನೀಡಿದರೆ ಲಾಲ್ ಬಹದ್ದೂರ್ ಶಾಸ್ತ್ರೀಯವರು ಜೈ ಜವಾನ್ ಜೈ ಕಿಶಾನ್ ಘೋಷಣೆಯ ಮೂಲಕ ರೈತರ ಬೆನ್ನೆಲುಬಾಗಿ ನಿಂತರು. ದೇಶದಲ್ಲಿ ಸ್ವಾತಂತ್ರ್ಯಾ ನಂತರ ಸಮಾನತೆ ಮತ್ತು ಸಹಬಾಳ್ವೆಯನ್ನು ಕಳಲಿಸಿದಂತಹ ಪಕ್ಷ ಕಾಂಗ್ರೇಸ್ ಪಕ್ಷವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.
ಅವರು ಸೋಮವಾರ ಕಾಂಗ್ರೇಸ್ ಪಕ್ಷದ ವತಿಯಿಂದ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಗುರುವಾಯನಕೆರೆಯಿಂದ ಬೆಳ್ತಂಗಡಿಯವರೆಗೆ ನಡೆದ ಕಾಲ್ನಡಿ ಜಾಥಾದ ಬಳಿಕ ಶ್ರೀ ಗುರುನಾರಾಯಣ ಸಭಾಭವನದಲ್ಲಿ ಮಾತನಾಡಿದರು.ಇಂದು ಆಳುತ್ತಿರುವ ಪಕ್ಷ ಧರ್ಮ ಧರ್ಮದ ನಡುವೆ ಧ್ವೇಷ, ಜಾತಿ ಜಾತಿಗಳ ನಡುವೆ ದ್ವೇಷವನ್ನು ಸೃಷ್ಠಿ ಮಾಡುತ್ತಿದೆ. ಇದರಿಂದಾಗಿ ಸಮಾಜದಲ್ಲಿ ನೆಮ್ಮದಿ ಇಲ್ಲದಂತಾಗಿದೆ ಎಂದರು.
ಕಾಂಗ್ರೇಸ್ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ನೆನಪಿಸಲು ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಕಾಂಗ್ರೇಸ್ ಪಕ್ಷವು ರಾಜ್ಯಾದ್ಯಂತ ಕಾಲ್ನಡಿಗೆ ಜಾಥಾ ಮಾಡುತ್ತಿದ್ದು ಇದರ ಭಾಗವಾಗಿ ಬೆಳ್ತಂಗಡಿಯಲ್ಲೂ ಕಾಲ್ನಡಿಗೆ ಜಾಥ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಕಾಂಗ್ರೇಸ್ ಜಿಲ್ಲಾ ಉಸ್ತುವಾರಿಗಳಾದ ಕೃಷ್ಣಮೂರ್ತಿ, ಧೀರಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಜಿ.ಪಂ ಮಾಜಿ ಸದಸ್ಯರುಗಳಾದ ಶೇಖರ್ ಕುಕ್ಕೇಡಿ, ನಮಿತಾ, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ರಾಜಶೇಖರ ಅಜ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಕುಮಾರ್, ಯೂತ್ ಕಾಂಗ್ರೇಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ನಗರ ಬ್ಲಾಕ್ ಕಾಂಗ್ರೇಸ್ ವಕ್ತಾರ ಮನೋಹರ್ ಕುಮಾರ್ ಎ, ತಾಲೂಕು ಯುವ ಕಾಂಗ್ರೇಸ್ ಅಧ್ಯಕ್ಷ ಅನೀಲ್ ಪೈ, ತಾ.ಪಂ. ಮಾಜಿ ಸದಸ್ಯ ಗೋಪಿನಾಥ್, ನ.ಪಂ ಸದಸ್ಯ ಜಗದೀಶ್ ಡಿ., ದ.ಕ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಕರೀಂ ಗೇರುಕಟ್ಟೆ, ಮಾಲಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಮುಖಂಡರುಗಳಾದ ಬಿ.ಕೆ ವಸಂತ್, ಚಂದು ಎಲ್, ಅಜಯ್ ಮೊದಲಾದವರು ಉಪಸ್ಥಿತರಿದ್ದರು.