News Karnataka Kannada
Saturday, May 04 2024
ಮಂಗಳೂರು

ಬಿಜೆಪಿ ಈಗ ವ್ಯಕ್ತಿ ಕೇಂದ್ರಿತ ಪಕ್ಷ, ಭಾವನಾತ್ಮಕ ಟ್ವೀಟ್‌ ಹಂಚಿಕೊಂಡ ಶೆಟ್ಟರ್‌

BJP is now a person-centric party, Shettar shared an emotional tweet
Photo Credit : News Kannada

ಬೆಂಗಳೂರು: ಮಾಜಿ ಸಿಎಂ, ಹಿರಿಯ ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಭಾವನಾತ್ಮಕ ಟ್ವೀಟ್‌ ಹಂಚಿಕೊಂಡಿದ್ದು ಅದರ ವಿವರ ಇಲ್ಲಿದೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ, ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್‌ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅಥ೯ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ ಹುಬ್ಬಳ್ಳಿ ಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ. ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ

ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬಂದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನಾನು ಹಠಕ್ಕೆ ಬಿಟ್ಟ ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಕೆ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ ಸಣ್ಣ ಹುಡುಗನಂತೆ ನಡೆಸಿಕೊಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಷಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸ‌ರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಉತ್ತರ ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ನನ್ನನ್ನು ಕಾಂಗ್ರೆಸ್‌ಗೆ ಬರುವಂತೆ ಕೇಳಿಕೊಂಡರು. ಬಹಳ ಸಂತೋಷದಿಂದ ಕಾಂಗ್ರೆಸ್‌ ಸೇರುತ್ತಿದ್ದೇನೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ತ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ, ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು. ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ನಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ರೆ ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ರಾಜೀನಾಮೆ ನೀಡುತ್ತೇನೆ. ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ. ಆದರೂ ಅವರು  ಒಪ್ಪಲಿಲ್ಲ ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎಂದು ಕೇಳಿದರೂ ಅದಕ್ಕೆ ಅವಕಾಶ ನೀಡಿಲ್ಲ. ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇವೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿರುತ್ತೇನೆ ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು