ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಿದರು. ಈ ವೇಳೆ ಸಿದ್ದರಾಮಯ್ಯ ಲಿಂಗಾಯಿತ ಹೇಳಿಕೆಯಿಂದ ಬಿಜೆಪಿಗೆ ಲಾಭ ಎಂಬ ಸಿಎಂ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ಹೇಳಿಕೆಯಿಂದ ಓಟ್ ಬರುತ್ತದೆ ಅಂದರೆ ಅವರು ಏನೂ ಅಭಿವೃದ್ಧಿ ಕಾರ್ಯ ಮಾಡಿಲ್ಲ ಅಂತ ಅರ್ಥ ಎಂದರು. ಬಿಜೆಪಿಗೆ ಗೆಲುವು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಎದುರಾಗಿದೆ ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಇಂದು ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿರುವ ಖರ್ಗೆ, ನಾಳೆ ಬೆಳಿಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಬಳಿಕ ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರ ನಡೆಸುವರು.
ಸಂಜೆ 4 ಗಂಟೆಗೆ ಮತ್ತೆ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ ನಡೆಸುವರು. ನಂತರ ಸಭೆ ನಡೆಸಿ ಸಂಜೆ 6 ಗಂಟೆಗೆ ಮಂಗಳೂರಿನಿಂದ ವಾಪಾಸ್ ಆಗುವರು.