ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆಗೆ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಎಚ್ಚರಿಕೆ ನೀಡಿದ್ದಾರೆ.
ಯಾರು ನಮ್ಮ ಕಾರ್ಯಕರ್ತರ ಮೇಲೆ ಅಮಾನುಷವಾಗಿ ದೌರ್ಜನ್ಯವೆಸಗಿದ್ದಾರೋ ಅವರನ್ನ ಸಸ್ಪೆಂಡ್ ಮಾಡಬೇಕು. ಇದರಲ್ಲಿ ರಾಜಕೀಯ ಬೇಡ, ನ್ಯಾಯ ಕೊಡಿಸಿ. ಯಾರೆಲ್ಲಾ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವಾಗಿದ್ಯೋ ಅವೆರೆಲ್ಲ ನಮ್ಮವರು. ತಕ್ಷಣ ಅಮಾನಯಷವಾಗಿ ವರ್ತಿಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹಿಂದೂ ಸಮಾಜದಿಂದ ಹೋರಾಟ ನಡೆಯಲಿದೆ ಎಂದರು.
ಅಗತ್ಯ ಬಿದ್ದಲ್ಲಿ ಪೊಲೀಸ್ ಸ್ಟೇಷನ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇಂದು ಸಂಜೆ ವೇಳೆಗೆ ನ್ಯಾಯ ಒದಗಿಸಿ ಎಂದು ಎಸ್ಪಿಗೆ ಕಿಶೋರ್ ಕುಮಾರ್ ಮನವಿ ಮಾಡಿದ್ದಾರೆ.