ಉಳ್ಳಾಲ: ಭಾರತೀಯ ಜನತಾ ಪಾರ್ಟಿಯ ಮಹಿಳೆಯರ ಸಂಘಟನಾತ್ಮಕವಾದ ಕೆಲಸ ಕಾರ್ಯಗಳಿಂದ ಇಂದು ದೇಶ, ರಾಜ್ಯ ಹಾಗೂ ಹಳ್ಳಿಹಳ್ಳಿಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆದ್ದು ಬಂದಿದ್ದು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಇಂತಹ ಕಾರ್ಯಗಳು ನಡೆಯಬೇಕು ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ ಉಚ್ಚಿಲ್ ಅಭಿಪ್ರಾಯಪಟ್ಟರು.
ಪಂಡಿತ್ ಹೌಸ್ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಮಂಗಳೂರು ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯರ್ ಮಾತನಾಡಿ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಮಹಿಳೆಯರು ಕಾರ್ಯಶೀಲರಾಗಿ ತಮ್ಮನ್ನು ತಾವೇ ತೊಡಗಿಸಿಕೊಳ್ಳಬೇಕೆಂದು ತಮ್ಮ ಅತಿಥಿಯ ನುಡಿಗಳಲ್ಲಿ ಮಾತನಾಡಿದರು.ಮಹಿಳಾ ಮೋರ್ಚಾದ ಜಿಲ್ಲಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಇವರ ಅಧ್ಯಕ್ಷತೆ ವಹಿಸಿದ್ದರು. ಸಂಘಟನಾತ್ಮಕವಾಗಿ ಸೇವಂತಿ ಶ್ರೀಯಾನ್ ಅವರು ಮಾತಾಡಿದರು.ಜಿಲ್ಲಾ ಮಾಧ್ಯಮ ಸಂಚಾಲಕಿ ಮಮತಾ ಕೇಶವ್ ಉಪಸ್ಥಿತರಿದ್ದರು.