News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಸರ್ವ ಜನಾಂಗದ ಶಾಂತಿಯ ತೋಟ ನನ್ನ ಕ್ಷೇತ್ರ, ಶಾಸಕ ರಾಜೇಶ್‌ ನಾಯ್ಕ್‌

Bjp MLAs should be elected once again in Bantwal constituency
Photo Credit : News Kannada

ಬಂಟ್ವಾಳ: ಶಾಂತಿ, ನೆಮ್ಮದಿಯ ಜೊತೆಗೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರಣಕ್ಕಾಗಿ ಬಂಟ್ವಾಳ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಶಾಸಕರ ಆಯ್ಕೆಯಾಗಬೇಕು, ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನರು ಸಹಕಾರ ನೀಡಿ ಗೆಲ್ಲಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಮನವಿ ಮಾಡಿದರು.

ನಾವೂರ ಶಕ್ತಿ ಕೇಂದ್ರದ ಗಂಗಾಧರ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.
ಅಮಾಯಕರು ಜೀವ ಕಳೆದುಕೊಂಡು, ತಾಲೂಕಿನ ತಾಯಂದಿರು ನಿತ್ಯ ಕಣ್ಣೀರು ಹಾಕುವ ದಿನವನ್ನು ದೂರ ಮಾಡಿ, ಅನಗತ್ಯವಾಗಿ ಪ್ರಕರಣಗಳನ್ನು ಹಾಕಿಸಿಕೊಳ್ಳುವುದನ್ನು ನಿಲ್ಲಿಸಿ ಶಾಂತಿಯ ಬಂಟ್ವಾಳ ನಿರ್ಮಿಸುವಲ್ಲಿ ಕ್ಷೇತ್ರದ ಜನರ ಸಹಕಾರ ಅನನ್ಯ ಎಂದರು.

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಜೊತೆಯಲ್ಲಿ ಕ್ಷೇತ್ರದ ಜನರ ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇನೆ ಎಂದರು.

ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಬಂಟ್ವಾಳದ ಮಹಿಳೆಯ ಅಂತ್ಯಕ್ರಿಯೆಗೆ ಜಾಗನೀಡದ ಸಮಯದಲ್ಲಿ ಒಡ್ಡೂರಿನ ಮನೆಯ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆ ಮಾಡಿ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ ರಾಜ್ಯದ ಏಕೈಕ ಶಾಸಕ ರಾಜೇಶ್ ನಾಯ್ಕ್. ಅಂತಹ ಮಾನವೀಯ ಮೌಲ್ಯವಿರುವ ಗುಣವಂತ ವ್ಯಕ್ತಿ ರಾಜೇಶ್ ನಾಯ್ಕ್ ಅವರನ್ನು ಮತ್ತೆ ಶಾಸಕನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ನೆಹರು ವಂಶ, ಕುಟುಂಬವನ್ನು ಬದುಕಿಸಲು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ದೇಶವನ್ನು ಉಳಿಸಲು ಹೋರಾಟ ನಡೆಸುತ್ತಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ನಾವೂರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಪ್ರಭು, ಶಕ್ತಿ ಕೇಂದ್ರದ ಪ್ರಮುಖ ಶಾಂತಪ್ಪ ಪೂಜಾರಿ, ಶಕ್ತಿ ಕೇಂದ್ರದ ಸದಸ್ಯ ಸದಾನಂದ ನಾವೂರ, ಗ್ರಾ.ಪಂ.ಸದಸ್ಯರಾದ ವಿಜಯ ನಾವೂರ, ಜನಾರ್ದನ, ತ್ರಿವೇಣಿ, ಲೀಲಾ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು