News Karnataka Kannada
Wednesday, May 08 2024
ಮಂಗಳೂರು

ಮಂಗಳೂರು: ಹಿಂದುತ್ವದ ಕಾರ್ಯಕರ್ತರಿಗೆ ಬಿಜೆಪಿ 25 ಸೀಟು ಬಿಟ್ಟು ಕೊಡಬೇಕು- ಪ್ರಮೋದ್ ಮುತಾಲಿಕ್

Bjp should give 25 seats to Hindutva workers: Pramod Muthalik
Photo Credit : R Bhat

ಮಂಗಳೂರು: ವಿಧಾನಸಭೆಯಲ್ಲಿ ಹಿಂದುತ್ವ , ಗೋವುಗಳ ಪರವಾಗಿ ಧ್ವನಿ ಇರುವಂತಾಗಲು ನಮ್ಮ ಕಾರ್ಯಕರ್ತರು ಶಾಸಕರಾಗಬೇಕು ಅದಕ್ಕಾಗಿ ಮುಂದಿನ ಚುನಾವಣೆಯಲ್ಲಿ ಕನಿಷ್ಠ ಇಪ್ಪತ್ತೈದು ಸೀಟನ್ನು ಹಿಂದುತ್ವದ ಹಿನ್ನೆಲೆ ಕಾರ್ಯಕರ್ತರಿಗೆ ನೀಡಬೇಕು ಬಿಜೆಪಿ ಮುಂದೆ ನಾವು ಬೇಡಿಕೆ ಇಟ್ಟಿದ್ದೇವೆ ಪರಿಗಣಿಸದೇ ಇದ್ದರೆ ನಮ್ಮ ಗುರಿ ನಾವು ನೋಡಿಕೊಳ್ಳುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮುತಾಲಿಕ್ ಶ್ರೀರಾಮಸೇನೆ ರಾಜಕೀಯ ಪಕ್ಷ ಅಲ್ಲ ,ಚುನಾವಣೆ ಸ್ಪರ್ಧೆ ಮಾಡಲ್ಲ ಆದ್ರೆ ಬಿಜೆಪಿ ಗೆ ಬೆಂಬಲಿಸುತ್ತೇವೆ ಹಿಂದುತ್ವದ ಕಾರ್ಯಕರ್ತರಿಗೆ ಬಿಜೆಪಿ ಸೀಟು ಕೊಡಬೇಕೆಂದು ಆಗ್ರಹಿಸುತ್ತೇವೆ ಎಂದರು.

ಬಿಜೆಪಿ ಸರಕಾರದ ನಡೆಯಿಂದ ಹಿಂದೂ ಸಮಾಜ ರೋಸಿ ಹೋಗಿದೆ ಈಗಲೇ ನೀವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ಧೂಳಿಪಟ ಆಗುತ್ತೀರಿ 25 ಸೀಟು ಹಿಂದೂ ಕಾರ್ಯಕರ್ತರಿಗೆ ಕೊಡಿ ರಾಜ್ಯದಲ್ಲಿ ನೂರ ಐವತ್ತು ಕ್ಕೂ ಹೆಚ್ಚು ಸೀಟನ್ನು ಗೆಲ್ಲಿಸಿಕೊಡುತ್ತೇವೆ .ಕಟ್ಟರ್ ಹಿಂದುತ್ವ ಪರ ನಿಂತ ದಕ್ಕಾಗಿ ನನ್ನನ್ನು ಬಿಜೆಪಿಯವರು ತಡೆಯುತ್ತಿದ್ದಾರೆ ಹಿಂದೆ ಕಾಂಗ್ರೆಸ್ ಜೆಡಿಎಸ್ ಸರಕಾರ ಇದ್ದಾಗಲೂ ತಡೆದಿದ್ದಾರೆ .ಇವರಿಗೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಅದು ನಮ್ಮಿಂದ ಆಗುತ್ತಿಲ್ಲ ಎಂದರು.

ಗೋವಾದಲ್ಲಿ ಬಿಜೆಪಿ ಸರ್ಕಾರ ಇದ್ದರೂ 8ವರ್ಷಗಳಿಂದ ನನಗೆ ನಿರ್ಬಂಧ ಹಾಕಿದ್ದಾರೆ ಇವರು ಹಿಂದುತ್ವದ ಬಗ್ಗೆ ನೈಜ ಕಾಳಜಿ ಇದ್ದರೆ ಅಲ್ಲಿನ ನಿರ್ಬಂಧ ತೆರವು ಮಾಡು ತ್ತಿದ್ದರು . ಗೋವಾಕ್ಕೆ ಪಾಕಿಸ್ತಾನದಿಂದ ಬರೋದಲ್ಲ ನೆರೆಯ ಕರ್ನಾಟಕದಲ್ಲಿರುವ ವ್ಯಕ್ತಿಯನ್ನು ತಡೆಯುದಾದರೆ ಇದರ ಅರ್ಥ ಏನೆಂದು ಪ್ರಶ್ನಿಸಿದರು.

ಇಸ್ಲಾಮ್ ಹುಟ್ಟಿದಾಗಿನಿಂದ ಈ ರೀತಿಯ ಕೊಲೆ ಹಿಂಸೆ ನಡೆಯುತ್ತಾ ಬಂದಿದೆ ಇವರ ಬದಲಾಗುತ್ತಿಲ್ಲ ನಾವು ನೀವು ಇನ್ನೂ ಸೌಹಾರ್ದದಿಂದ ಇರಲು ಕಾಲ ಮುಗಿದಿದೆ ಇನ್ನೇನಿದ್ದರೂ ನಮ್ಮ ನಿಮ್ಮ ನಡುವೆ ಸಂಘರ್ಷ ಅಷ್ಟೇ ಇರುತ್ತದೆ .ಹಿಂದೂ ಸಮಾಜ ಇದಕ್ಕೆ ಉತ್ತರ ಕೊಡಲು ಮರೆಯಲಿಲ್ಲ ಎಂದು ಹೇಳಿದ ಅವರು ಪ್ರವೀಣ್ ಪ್ರಕರಣದಲ್ಲಿ ಎನ್ ಐಎ ತನಿಖೆಯಿಂದ ನ್ಯಾಯ ಸಿಗುತ್ತೆ ಎನ್ನುವುದನ್ನು ನಾನು ಒಪ್ಪುವುದಿಲ್ಲ , ಪರಮೇಶ್ ಮೇಸ್ತ ಪ್ರಕರಣವನ್ನು ಎನ್ ಐಎ ನೀಡಿದರು ಆದ್ರೆ ಈ ತಂಡ ನಿರ್ಲಕ್ಷ್ಯ ನೀಚರು ಪರಮೇಶ್ ಮೇಸ್ತ ಮನೆಗೆ ಭೇಟಿ ನೀಡಿಲ್ಲ .ಪಿಎಫ್ಐ ಎಸ್ಡಿಪಿಐ ದೇಶದ್ರೋಹಿ ಸಂಘಟನೆ ಭಾಗಿಯಾಗಿದೆ ಹೀಗಾಗಿ ಇವರ ಮೇಲೆ ಕೋಕಾ ಕಾಯ್ದೆ ಹಾಕಬೇಕೆಂದು ಹೇಳಿದರು.

ರಾತ್ರಿ ವೇಳೆ ಧ್ವನಿವರ್ಧಕ ನಿಷೇಧದಿಂದಾಗಿ ಕರಾವಳಿಯಲ್ಲಿ ಯಕ್ಷಗಾನ ನಾಟಕ ದೇವಸ್ಥಾನದ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ ಎಂಬ ಪ್ರಶ್ನೆಗೆ ಇದು ಕಾನೂನು ಜಾರಿ ಮಾಡಿದ್ದು ಸುಪ್ರೀಂ ಕೋರ್ಟ್ ಮುತಾಲಿಕ್ ಅಲ್ಲ , ಆದೇಶ ಆಗಿ ಆದ್ಮೇಲೆ ವರ್ಷವಾದರೂ ಅದನ್ನು ಜಾರಿಗೆ ತಂದಿಲ್ಲ ಮುಸ್ಲಿಮರು ಸುಪ್ರೀಂಕೋರ್ಟಿಗೂ ನಮಗೂ ಸಂಬಂಧವಿಲ್ಲ ಎಂಬ ನೀಚ ನಿರ್ಲಕ್ಷ್ಯ ನಿರ್ಲಜ್ಜ ಹೇಳಿಕೆ ನೀಡುತ್ತಿದ್ದಾರೆ . ಸುಪ್ರೀಂಕೋರ್ಟ್ ಮಾತು ಕೇಲಲ್ಲ ಅಂದರೆ ಪಾಕಿಸ್ತಾನದ ಹೋಗಿ ನಿಮ್ಮ ನಮಾಜಿಗೆ ನಮ್ಮ ವಿರೋಧವಿಲ್ಲ ಆದರೆ ಸುತ್ತಮುತ್ತಲಿನ ಜನರ ಕಿವಿ ಕಚ್ಚುವ ಶಬ್ದಕ್ಕೆ ಮಾತ್ರ ನಮ್ಮ ವಿರೋಧ ಇದೆ ಕೋರ್ಟ್ ಅಲ್ಲ ಕುರಾನ್ ನಮ್ಮ ಕಾನೂನೆಂಬ ಸೊಕ್ಕಿನ ಮಾತಾಡಿ ಒಪ್ಪಲ್ಲ .ನಮ್ಮ ಹೋರಾಟದ ಕಾರಣ ಇಪ್ಪತ್ತೈದು ಶೇಕಡಾ ಸದ್ದು ನಿಂತಿದೆ ಇದಕ್ಕೆ ಕಾರಣವಾಗಿದ್ದು ಶ್ರೀರಾಮ ಸೇನೆ ಹೋರಾಟ ಎಂದರು ಮುತಾಲಿಕ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು