ಬಂಟ್ವಾಳ : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣದ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಮಂಗಳೂರು ಟೌನ್ ಹಾಲ್ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಜು.31 ರ ಸೋಮವಾರ ಬೆಳಿಗ್ಗೆ ಆಯೋಜಿಸಿರುವ ಪ್ರತಿಭಟನೆಯ ಪೂರ್ವಭಾವಿಯಾಗಿ ಶನಿವಾರ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತನಾಡಿ, ಉಡುಪಿಯ ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಹಾಗೂ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಯಾವ ರೀತಿ ಕಾರ್ಯಪ್ರವೃತರಾಗಬೇಕು ಎಂಬ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ದೇವದಾಸ ಶೆಟ್ಟಿ ಗೋವಿಂದ ಪ್ರಭು, ಕ್ಷೇತ್ರದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು, ಪುರಸಭೆ ಸದಸ್ಯರು, ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು .