News Karnataka Kannada
Friday, May 10 2024
ಮಂಗಳೂರು

ವಿಡಿಯೋ ಚಿತ್ರೀಕರಣದ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಜು.31 ರಂದು ಪ್ರತಿಭಟನೆ

BJP to hold protest in Mangaluru on July 31 against video shooting
Photo Credit : News Kannada

ಬಂಟ್ವಾಳ : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣದ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಮಂಗಳೂರು ಟೌನ್ ಹಾಲ್‌ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಜು.31 ರ ಸೋಮವಾರ ಬೆಳಿಗ್ಗೆ ಆಯೋಜಿಸಿರುವ ಪ್ರತಿಭಟನೆಯ ಪೂರ್ವಭಾವಿಯಾಗಿ ಶನಿವಾರ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಬಂಟ್ವಾಳ‌ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತನಾಡಿ, ಉಡುಪಿಯ ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಹಾಗೂ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಯಾವ ರೀತಿ ಕಾರ್ಯಪ್ರವೃತರಾಗಬೇಕು ಎಂಬ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ದೇವದಾಸ ಶೆಟ್ಟಿ ಗೋವಿಂದ ಪ್ರಭು, ಕ್ಷೇತ್ರದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು, ಪುರಸಭೆ ಸದಸ್ಯರು, ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು