News Karnataka Kannada
Thursday, May 02 2024
ಮಂಗಳೂರು

ಪುತ್ತೂರು: ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

BJP's election office inaugurated at Ashmi Comfort
Photo Credit : News Kannada

ಪುತ್ತೂರು: ಬೈಪಾಸ್ ರಸ್ತೆಯಲ್ಲಿರುವ ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಗುರುವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು.

ಗಣಹೋಮ ನೆರವೇರಿಸುವ ಮೂಲಕ ಕಚೇರಿ ಉದ್ಘಾಟನೆಗೊಂಡು ಚುನಾವಣೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಬೆಳಿಗ್ಗೆ ಕರ್ನಾಟಕದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲೇ ಕಚೇರಿ ಉದ್ಘಾಟನೆಗೊಂಡಿತು. ಗಣಹೋಮ ನೆರವೇರಿದ ಬಳಿಕ ಬಿಜೆಪಿ ಮುಂಖಡರು, ಕಾರ್ಯಕರ್ತರು ಎಲ್ ಇಡಿ ಪರದೆ ಮೂಲಕ ನರೇಂದ್ರ ಮೋದಿಯರ ಭಾಷಣಕ್ಕೆ ಕಿವಿಯಾದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಪ್ಪಯ್ಯ ಮಣಿಯಾಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ವಿದ್ಯಾ ಆರ್.ಗೌರಿ, ಗೋಪಾಲಕೃಷ್ಣ ಹೇರಳೆ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಸಹಜ್ ರೈ ಬಳೆಜ್ಜ, ರಾಧಾಕೃಷ್ಣ ಬೋರ್ಕರ್, ಬೂಡಿಯಾರ್ ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು