ಮಂಗಳೂರು ನ್ಯೂಸ್ ಕರ್ನಾಟಕ: ವಾಮಾಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ , ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಅಲುಮಿನ್ ಹಾಗೂ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಫೌಂಡೇಶನ್ ಸಹಯೋಗದಲ್ಲಿ ನ್ಯೂಸ್ ಕರ್ನಾಟಕ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೇಡ್ ಕ್ರಾಸ್, ಲಯನ್ಸ್ & ಲಿಯೋ ಕ್ಲಬ್ ಮಂಗಳೂರು ಕೊಡಿಬೈಲ್ ಇವರ ವತಿಯಿಂದ ಇಂದು (ಜೂನ್ 13 )ಬೆಥಾನಿಯಾ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರಿಯೋ ಡಿಸೋಜಾ ಅವರು, ರಕ್ತದಾನ ಶಿಬಿರದಲ್ಲಿ ರಕ್ತದಾನದ ಮಹತ್ವದ ಕುರಿತು ಮಾತನಾಡಿ, ಪ್ರತಿಯೊಂದು ಮಕ್ಕಳು ರಕ್ತದಾನ ಮಾಡಿ ಜೀವ ಉಳಿಸುವ ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಂಡರೆ ಎಲ್ಲರಿಗೂ ಮಾದರಿಯಾಗುವುದು, ಮಾತ್ರವಲ್ಲದೆ ಈ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ನಡೆದಿರುವುದು ಹೆಮ್ಮೆಯ ಸಂಗತಿ ಎಂದು ರಕ್ತದಾನಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ನಿರ್ದೇಶಕರಾದ ರೆವರೆಂಡ್ ಫಾದರ್ ವಿಲ್ಪ್ರೆಡ್ ಪ್ರಕಾಶ್ ಡಿ’ಸೋಜಾ, ಎಚ್. ಆರ್ ಮ್ಯಾನೇಜರ್ ಶ್ರೀ ರಾಕೇಶ್ ಲೋಬೊ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಈ ರಕ್ತದಾನ ಶಿಬಿರದ ಯಶಸ್ವಿಗಾಗಿ, ಅಧ್ಯಕ್ಷರು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ವಿನೂತನ್ ಕಲಿವೀರ್ ಸಹಕರಿಸಿದರು. ಲಯನ್ಸ್ ಸಂಘದ ಪಧಾದಿಕಾರಿಗಳು ಈ ಶಿಬಿದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಹಾಗೂ ರೋಟರಿ ಕ್ಲಬ್ ಮಂಗಳೂರು ಸಿಟಿ ಪಧಾದಿಕಾರಿ ಪಾಲ್ಗೊಂಡಿದ್ದರು.
ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂಧಿ ವರ್ಗದವರು ಮಾತ್ರವಲ್ಲದೆ, ನಗರದ ನಾನಾ ಕಡೆಯಿಂದ ಹಲವರು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಸುಮಾರು ಆರೋಗ್ಯವಂತ 85 ಮಂದಿ ರಕ್ತದಾನ ಮಾಡಿದ್ದಾರೆ. ಪ್ರಮುಖವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.