News Karnataka Kannada
Sunday, April 28 2024
ಮಂಗಳೂರು

ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರ ಯಶಸ್ವಿ

blood danation camp
Photo Credit : News Kannada

ಮಂಗಳೂರು ನ್ಯೂಸ್ ಕರ್ನಾಟಕ: ವಾಮಾಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ , ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಅಲುಮಿನ್ ಹಾಗೂ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಫೌಂಡೇಶನ್ ಸಹಯೋಗದಲ್ಲಿ ನ್ಯೂಸ್ ಕರ್ನಾಟಕ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೇಡ್ ಕ್ರಾಸ್, ಲಯನ್ಸ್ & ಲಿಯೋ ಕ್ಲಬ್ ಮಂಗಳೂರು ಕೊಡಿಬೈಲ್ ಇವರ ವತಿಯಿಂದ ಇಂದು (ಜೂನ್ 13 )ಬೆಥಾನಿಯಾ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರಿಯೋ ಡಿಸೋಜಾ ಅವರು, ರಕ್ತದಾನ ಶಿಬಿರದಲ್ಲಿ ರಕ್ತದಾನದ ಮಹತ್ವದ ಕುರಿತು ಮಾತನಾಡಿ, ಪ್ರತಿಯೊಂದು ಮಕ್ಕಳು ರಕ್ತದಾನ ಮಾಡಿ ಜೀವ ಉಳಿಸುವ ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಂಡರೆ ಎಲ್ಲರಿಗೂ ಮಾದರಿಯಾಗುವುದು, ಮಾತ್ರವಲ್ಲದೆ ಈ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ನಡೆದಿರುವುದು ಹೆಮ್ಮೆಯ ಸಂಗತಿ ಎಂದು ರಕ್ತದಾನಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ನಿರ್ದೇಶಕರಾದ ರೆವರೆಂಡ್ ಫಾದರ್ ವಿಲ್ಪ್ರೆಡ್ ಪ್ರಕಾಶ್ ಡಿ’ಸೋಜಾ, ಎಚ್. ಆರ್ ಮ್ಯಾನೇಜರ್ ಶ್ರೀ ರಾಕೇಶ್ ಲೋಬೊ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಈ ರಕ್ತದಾನ ಶಿಬಿರದ ಯಶಸ್ವಿಗಾಗಿ, ಅಧ್ಯಕ್ಷರು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ವಿನೂತನ್ ಕಲಿವೀರ್ ಸಹಕರಿಸಿದರು. ಲಯನ್ಸ್ ಸಂಘದ ಪಧಾದಿಕಾರಿಗಳು ಈ ಶಿಬಿದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಹಾಗೂ ರೋಟರಿ ಕ್ಲಬ್ ಮಂಗಳೂರು ಸಿಟಿ ಪಧಾದಿಕಾರಿ ಪಾಲ್ಗೊಂಡಿದ್ದರು.

blood

ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು  ಕಾಲೇಜಿನ ಸಿಬ್ಬಂಧಿ ವರ್ಗದವರು  ಮಾತ್ರವಲ್ಲದೆ, ನಗರದ ನಾನಾ ಕಡೆಯಿಂದ ಹಲವರು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಸುಮಾರು ಆರೋಗ್ಯವಂತ 85 ಮಂದಿ ರಕ್ತದಾನ ಮಾಡಿದ್ದಾರೆ. ಪ್ರಮುಖವಾಗಿ ಹೆಚ್ಚಿನ ಸಂಖ್ಯೆಯಲ್ಲಿ  ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು