ಮಂಗಳೂರು ನ್ಯೂಸ್ ಕರ್ನಾಟಕ: ವಾಮಾಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ , ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಅಲುಮಿನ್ ಹಾಗೂ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಫೌಂಡೇಶನ್ ಸಹಯೋಗದಲ್ಲಿ ನ್ಯೂಸ್ ಕರ್ನಾಟಕ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೇಡ್ ಕ್ರಾಸ್, ಲಯನ್ಸ್ & ಲಿಯೋ ಕ್ಲಬ್ ಮಂಗಳೂರು ಕೊಡಿಬೈಲ್ ಇವರ ವತಿಯಿಂದ ಇಂದು (ಜೂನ್ 13 )ಬೆಥಾನಿಯಾ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರಿಯೋ ಡಿಸೋಜಾ ಅವರು, ರಕ್ತದಾನ ಶಿಬಿರದಲ್ಲಿ ರಕ್ತದಾನದ ಮಹತ್ವದ ಕುರಿತು ಮಾತನಾಡಿ, ಪ್ರತಿಯೊಂದು ಮಕ್ಕಳು ರಕ್ತದಾನ ಮಾಡಿ ಜೀವ ಉಳಿಸುವ ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಂಡರೆ ಎಲ್ಲರಿಗೂ ಮಾದರಿಯಾಗುವುದು, ಮಾತ್ರವಲ್ಲದೆ ಈ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ನಡೆದಿರುವುದು ಹೆಮ್ಮೆಯ ಸಂಗತಿ ಎಂದು ರಕ್ತದಾನಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ನಿರ್ದೇಶಕರಾದ ರೆವರೆಂಡ್ ಫಾದರ್ ವಿಲ್ಪ್ರೆಡ್ ಪ್ರಕಾಶ್ ಡಿ’ಸೋಜಾ, ಎಚ್. ಆರ್ ಮ್ಯಾನೇಜರ್ ಶ್ರೀ ರಾಕೇಶ್ ಲೋಬೊ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಈ ರಕ್ತದಾನ ಶಿಬಿರದ ಯಶಸ್ವಿಗಾಗಿ, ಅಧ್ಯಕ್ಷರು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ವಿನೂತನ್ ಕಲಿವೀರ್ ಸಹಕರಿಸಿದರು. ಲಯನ್ಸ್ ಸಂಘದ ಪಧಾದಿಕಾರಿಗಳು ಈ ಶಿಬಿದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಹಾಗೂ ರೋಟರಿ ಕ್ಲಬ್ ಮಂಗಳೂರು ಸಿಟಿ ಪಧಾದಿಕಾರಿ ಪಾಲ್ಗೊಂಡಿದ್ದರು.
ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂಧಿ ವರ್ಗದವರು ಮಾತ್ರವಲ್ಲದೆ, ನಗರದ ನಾನಾ ಕಡೆಯಿಂದ ಹಲವರು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಸುಮಾರು ಆರೋಗ್ಯವಂತ 85 ಮಂದಿ ರಕ್ತದಾನ ಮಾಡಿದ್ದಾರೆ. ಪ್ರಮುಖವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ