ಮಂಗಳೂರು: ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಅಳಪೆಯಲ್ಲಿ ನಡೆದಿದೆ. ಸುಧಾಕರ ಶೆಟ್ಟಿ ಎಂಬುವವರಿಗೆ ಬಸೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಸಂಚಾರ ದಕ್ಷಿಣ ಪೊಲೀಸರು ತಿಳಿಸಿದ್ದಾರೆ.
ಪಂಪ್ ವೆಲ್ ನಿಂದ ಪಡೀಲ್ ಕಡೆಗೆ ಹಾದು ಹೋಗಿರುವ ರಸ್ತೆಯನ್ನು ಸುಧಾಕರ ಶೆಟ್ಟಿ ದಾಟುತ್ತಿರುವಾಗ ಖಾಸಗಿ ಬನ್ನೊಂದು ಡಿಕ್ಕಿ ಹೊಡೆದಿದೆ. ಅಪಘಾತ ಎಸಗಿದ ಆರೋಪಿಯು ಸ್ಥಳದಿಂದ ಬಸ್ ಸಮೇತ ಪರಾರಿಯಾಗಿದ್ದು, ಸ್ಥಳೀಯರು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ್ದರು.
ಹೆಚ್ಚಿನ ಚಿಕಿತ್ಸೆಗೆ ಸುಧಾಕರ ಶೆಟ್ಟಿಯ ಪುತ್ರ ಸುಶ್ರಾಥ್ ಶೆಟ್ಟಿ ವೆನ್ಸಾಕ್ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ಸುಧಾಕರ ಶೆಟ್ಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.