ಮಂಗಳೂರು: ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಅಳಪೆಯಲ್ಲಿ ನಡೆದಿದೆ. ಸುಧಾಕರ ಶೆಟ್ಟಿ ಎಂಬುವವರಿಗೆ ಬಸೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಸಂಚಾರ ದಕ್ಷಿಣ ಪೊಲೀಸರು ತಿಳಿಸಿದ್ದಾರೆ.
ಪಂಪ್ ವೆಲ್ ನಿಂದ ಪಡೀಲ್ ಕಡೆಗೆ ಹಾದು ಹೋಗಿರುವ ರಸ್ತೆಯನ್ನು ಸುಧಾಕರ ಶೆಟ್ಟಿ ದಾಟುತ್ತಿರುವಾಗ ಖಾಸಗಿ ಬನ್ನೊಂದು ಡಿಕ್ಕಿ ಹೊಡೆದಿದೆ. ಅಪಘಾತ ಎಸಗಿದ ಆರೋಪಿಯು ಸ್ಥಳದಿಂದ ಬಸ್ ಸಮೇತ ಪರಾರಿಯಾಗಿದ್ದು, ಸ್ಥಳೀಯರು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ್ದರು.
ಹೆಚ್ಚಿನ ಚಿಕಿತ್ಸೆಗೆ ಸುಧಾಕರ ಶೆಟ್ಟಿಯ ಪುತ್ರ ಸುಶ್ರಾಥ್ ಶೆಟ್ಟಿ ವೆನ್ಸಾಕ್ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ಸುಧಾಕರ ಶೆಟ್ಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.