ಮಂಗಳೂರು: ಬಸ್ ನಿರ್ವಾಹಕನ ಮೇಲೆ ಅನ್ಯಕೋಮಿನ ಯುವಕರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ(ಸೆ.26) ವೇಳೆ ಬಸ್ ನಿಲ್ಲಿಸದ್ದಕ್ಕೆ ಚಾಲಕನನ್ನು ಎಳೆದು ಹಾಕಿ ಹಲ್ಲೆ ಮಾಡಿದ್ದಾರೆ. ಕಣ್ಣೂರು ಬಳಿ ಬಸ್ ನಿಲ್ಲಿಸದ್ದಕ್ಕೆ ಎಸ್.ಕೆ.ಟ್ರಾವೆಲ್ ಹೆಸರಿನ ಬಸ್ ನಿರ್ವಾಹಕ ಯಶವಂತ್ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ಗಂಭೀರ ಗಾಯಗೊಂಡ ನಿರ್ವಾಹಕ ಯಶವಂತ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೈಮಿಂಗ್ ಹಿನ್ನೆಲೆ ಕಣ್ಣೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಚಾಲಕ ಮುಂದೆ ಹೋಗಿದ್ದಾನೆ. ಇದರಿಂದ ಬಸ್ ನಲ್ಲಿದ್ದ ಪ್ಯಾಸೆಂಜರ್ ಒಬ್ಬ ಮೊದಲು ಹಲ್ಲೆ ಮಾಡಿದ್ದಾನೆ.
ಆ ಬಳಿಕ ಮತ್ತೆ ಹತ್ತಾರು ಜನ ನಿರ್ವಾಹಕನ ಎಳೆದು ಹಾಕಿ ಹಲ್ಲೆ ಮಾಡಿದ್ದಾರೆ ಎಂಬ ಆರೋಫ ಕೇಳಿ ಬಂದಿದೆ. ಸದ್ಯ ಎರಡೂ ಕಡೆಯವರಿಂದ ಕಂಕನಾಡಿ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ. ಇನ್ನು ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಇಂದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಅಡ್ಯಾರ್ ಕಟ್ಟೆ ಭಾಗದಲ್ಲಿ ಬಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಮಾಯಿಸಿದ್ದಾರೆ.