ಮಂಗಳೂರು: ಗುರುಪುರ ಬಳಿ ಬ್ರೇಕ್ ಫೇಲ್ ಆಗಿ ಬಸ್ ವೊಂದು ಪಲ್ಟಿಯಾದ ಘಟನೆ ಇಂದು ಸಂಜೆ (ಜ.02) ನಡೆದಿದೆ. ಬಿ.ಸಿ.ರೋಡ್ ಮತ್ತು ಕಿನ್ನಿಗೋಳಿ ನಡುವೆ ತೆರಳುತ್ತಿದ್ದ ವೇಳೆ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಉರುಳಿದೆ. ಪರಿಣಾಮ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿಗೆ ಗಾಯಗಳು ಆಗಿವೆ. ನವದುರ್ಗಾ ಹೆಸರಿನ ಖಾಸಗಿ ಬಸ್ ಅಪಘಾತಕ್ಕಿಡಾದ ಬಸ್ಸು ಬಸ್ಸು ಕೈಕಂಬದಿಂದ ಪೊಳಲಿ ಮಾರ್ಗವಾಗಿ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು. ಆದರೇ ಬಸ್ಸು ಕೈಕಂಬ ಪೊಳಲಿ ದ್ವಾರದ ಬಳಿ ಬರುತ್ತಲೇ ಚಾಲಕನ ಹತೋಟಿ ಕಳಕೊಂಡು ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.