News Karnataka Kannada
Tuesday, May 07 2024
ಮಂಗಳೂರು

ಮಂಗಳೂರು: ಹಿಂದುತ್ವ ಸಿದ್ದಾಂತದ ಕಾರ್ಯಕ್ರಮ ರದ್ದುಗೊಳಿಸುವಂತೆ ಕ್ಯಾಂಪಸ್ ಫ್ರಂಟ್ ಮನವಿ

Campus front seeks cancellation of Hindutva programme named 'Bharat Mata Puja'
Photo Credit : By Author

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಹಂಪನಕಟ್ಟೆ ಕಾಲೇಜಿನಲ್ಲಿ ಭಾರತ ಮಾತಾ ಪೂಜಾ ದಿನ ಹೆಸರಿನಲ್ಲಿ ನಾಳೆ ಆಗಸ್ಟ್ 11 ಕ್ಕೆ ಹಿಂದುತ್ವ ಸಿದ್ದಾಂತದ ಕಾರ್ಯಕ್ರಮವನ್ನು ಆಯೋಜಿಸಿರುವುದು ಖಂಡನೀಯ, ಇದನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.

ಭಾರತದ ಭೂಪಟವನ್ನೇ ಬದಲಾಯಿಸಿ, ಭಗವಧ್ವಜ ಹಿಡಿದ ಮಹಿಳೆಯನ್ನು ಚಿತ್ರೀಕರಿಸಿ ದೇಶದ್ರೋಹದ ಕೆಲಸವನ್ನು ಕಾಲೇಜು ಪ್ರಾಂಶುಪಾಲರ ಬೆಂಬಲದೊಂದಿಗೆ ಕಾಲೇಜು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ಎಬಿವಿಪಿ ಮಾಡಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸಿದೆ.

ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲವೆಂದು ಹಿಜಾಬ್ ಧಾರಿ ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಹಂಪನಕಟ್ಟೆ ಕಾಲೇಜು ಪ್ರಾಂಶುಪಾಲರಿಗೆ ಇದು ಧಾರ್ಮಿಕ ಆಚರಣೆಯಾಗಿ ಕಾಣಲಿಲ್ಲವೇ ಎಂದು ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾಧ್ಯಕ್ಷ ತಾಜುದ್ದೀನ್ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಸರ್ಫುದ್ದೀನ್, ಜಿಲ್ಲಾ ನಾಯಕರಾದ ಶಂಸುದ್ದೀನ್, ಅಫೀಝ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು