News Karnataka Kannada
Tuesday, April 30 2024
ಮಂಗಳೂರು

ಪರ್ಸ್‌, ಮೊಬೈಲ್‌ ಬಿಟ್ಟು ಸೋಮೇಶ್ವರ ಸಮುದ್ರ ತೀರದಿಂದ ಕಾರ್ ಡೀಲರ್ ನಾಪತ್ತೆ

Car dealer goes missing from Someshwara beach
Photo Credit : News Kannada

ಉಳ್ಳಾಲ : ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ.

ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು.

ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಹರೆಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಿಗ್ಗೆ ಮನೆಯಿಂದ ಪತ್ನಿಯ ಲ್ಲಿ ತಿಳಿಸಿ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.

ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪಸ್೯ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು