News Karnataka Kannada
Monday, April 29 2024
ಮಂಗಳೂರು

ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ

Car inspection of BJP state president- district president in Charmadi
Photo Credit : By Author

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ಮತ್ತು ಟ್ಯಾಗ್‌ಗಳನ್ನು ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 (ಇಂದು) ರಂದು ಎಸ್.ಎಸ್.ಟಿ. ಟೀಂ ನ ಅಧಿಕಾರಿಗಳು ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.

ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು