Categories: ಮಂಗಳೂರು

ಕಥೊಲಿಕ ಶಿಕ್ಷಣ ಮಂಡಳಿ ಶಿಕ್ಷಕರಿಗೆ ೫ ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್ ಪ್ರಾರಂಭ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಆಧೀನದ ಕಥೊಲಿಕ್ ಶಿಕ್ಷಣ ಮಂಡಳಿ (ಸಿಬಿಇ)ಯ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ಭೋಧಿಸುವ ಶಿಕ್ಷಕರಿಗಾಗಿ ೫ ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್ ಅನ್ನು ಏಪ್ರಿಲ್ ೧೭, ೨೦೨೩ ರಂದು ಮಂಗಳೂರಿನ ಪಾದುವಾ ಕಾಲೇಜಿನಲ್ಲಿ ಪ್ರಾರಂಭಿಸಲಾಯಿತು.

ಕಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾದರ್ ಆ್ಯಂಟನಿ ಸೆರಾ ಅವರು ಮಾತಾನಾಡುತ್ತಾ, “ಇಂಗ್ಲಿಷ್  ಮಾಧ್ಯಮ ಶಿಕ್ಷಕರಲ್ಲಿ ಸಂವಹನ ಕೌಶಲ್ಯವನ್ನು ಹೆಚ್ಚಿಸುವುದು, ಮತ್ತು ವಿದ್ಯಾರ್ಥಿಗಳೊಂದಿಗೆ ಮತ್ತು ಅವರ ಪೋಷಕರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸಲು ಅನುಕೂಲವಾಗುವಂತಹ ತರಬೇತಿ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.” ಎಂದು ಹೇಳಿದರು.

“ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ, ಶಿಕ್ಷಕರು ಇಂಗ್ಲಿಷ್‌ನಲ್ಲಿ ಮುಕ್ತ ಸಂವಹನವು ಮಾಡುವುದರಿಂದ ಕಷ್ಟಕರವಾದ ತರಗತಿಯ ವಾತಾವರಣವನ್ನು ಧನಾತ್ಮಕವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.” ಎಂದು ಫಾದರ್ ಸೆರಾ ಹೇಳಿದರು.

ಡಾ. ಅನುಪ್ ಡೆನ್ಜಿಲ್ ವೇಗಾಸ್ ಮಾತನಾಡಿ, “ತರಗತಿಯಲ್ಲಿ ಸಂವಹನವು ಮುಖ್ಯ ಕೀಲಿಯಾಗಿದೆ. ಶೇ ೫೦ ಜ್ಞಾನ ಮತ್ತು ಶೇ ೫೦  ಸಂವಹನ ಕೌಶಲ್ಯಗಳು ಪ್ರಭಾವಶಾಲಿ ಮತ್ತು ಪರಿಣಾಮಕಾರಿ ಬೋಧನೆಯನ್ನು ಪ್ರಸ್ತುತಪಡಿಸಲು ಸಾಕಷ್ಟು ಸಹಕಾರಿಯಾಗಿವೆ. ಒಬ್ಬ ಶಿಕ್ಷಕನು ಕೇಳುವ, ಓದುವ, ಮಾತನಾಡುವ ಮತ್ತು ಬರೆಯುವ ನಾಲ್ಕು ಸಂವಹನ ವಿಧಾನಗಳಲ್ಲಿ ಪ್ರವೀಣನಾಗಿರಬೇಕು. ಶಾಲೆಯ ಪರಿಸರದಲ್ಲಿ ಈ ಪ್ರಾವೀಣ್ಯತೆಯನ್ನು ಪರಿಣಾಮಕಾರಿಯಾಗಿ ಅನ್ವಯಿಸಲು ಉತ್ಸುಕನಾಗಿರಬೇಕು. ಇಂದು, ಹೆಚ್ಚಿನ ಪೋಷಕರು ಪದವೀಧರರು ಅಥವಾ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ನಾವು, ಶಿಕ್ಷಕರಾಗಿ, ಆ ವಿದ್ಯಾವಂತ ಪೋಷಕರೊಂದಿಗೆ ಮತ್ತು ಅವರ ಮಕ್ಕಳೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವಲ್ಲಿ ವಿಫಲರಾಗಿದ್ದೇವೆ” ಎಂದು ಡಾ. ಅನುಪ್ ಹೇಳಿದರು.

“ಕಥೊಲಿಕ್ ಶಿಕ್ಷಣ ಮಂಡಳಿಯು ನೋಂದಾಯಿತ ಶಿಕ್ಷಣ ಸಂಸ್ಥೆಯಾಗಿದ್ದು, ಸತತ ೯೦ ವರ್ಷಗಳ ಫಲಪ್ರದ ಸೇವೆಯನ್ನು ಪೂರ್ಣಗೊಳಿಸುತ್ತದೆ. ಇದು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ೧೯೩೨ ರಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ, ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳನ್ನು ವಿಭಜಿಸಿ ಪ್ರತ್ಯೇಕವಾಗಿ ನಿರ್ವಹಿಸಲಾಗಿದೆ” ಎಂದು ಫಾದರ್ ಆ್ಯಂಟನಿ ಸೆರಾ ತಿಳಿಸಿದರು.

ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ  ಜೋನ್ ಶೀತಲ್ ಮತ್ತು ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಪ್ರಮೀಳಾ ಡಿಸೋಜಾ ಸಂಪನ್ಮೂಲ ತಂಡದಲ್ಲಿದ್ದರು.

ಮೊದಲ ಬ್ಯಾಚ್‌ಗೆ ಜಿಲ್ಲೆಯ ೨೦೦ಕ್ಕೂ ಹೆಚ್ಚು ಆಂಗ್ಲ ಮಾಧ್ಯಮ ಶಿಕ್ಷಕರು ಉಪಸ್ಥಿತರಿದ್ದರು. ಬೆಂದೂರು ಚರ್ಚ್ನ ಧರ್ಮಗುರು ಮತ್ತು ಪಾದುವ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರು ವಂದನೀಯ ಫಾದರ್ ವಿನ್ಸೆಂಟ್ ಮೊಂತೇರೊ, ಪಾದುವ ಕಾಲೇಜಿನ ಪ್ರಾಂಶುಪಾಲ ವಂದನೀಯ ಫಾದರ್ ಅರುಣ್ ಲೋಬೊ ಮತ್ತು ಪಾದುವ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಗ್ಲಾಡಿಸ್ ಅಲೋಶಿಯಸ್ ಮತ್ತು ಸಂಪನ್ಮೂಲ ತಂಡದ ಮುಖ್ಯಸ್ಥ, ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇದರ ಇಂಗ್ಲಿಷ್ ವಿಭಾಗದ ಡಾ. ಅನುಪ್ ಡೆನ್ಜಿಲ್ ವೇಗಸ್ ಉಪಸ್ಥಿತರಿದ್ದರು

 

 

 

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago