News Karnataka Kannada
Friday, May 03 2024
ಮಂಗಳೂರು

ಮೂಡುಬಿದಿರೆ: ಸರ್ವಧರ್ಮಿಯರೊಂದಿಗೆ ತೆನೆ ಹಬ್ಬ ಆಚರಣೆ

Celebration of Thene festival with people of all religions
Photo Credit : News Kannada

ಮೂಡುಬಿದಿರೆ: ಸೆಪ್ಟೆಂಬರ್ 16 ರಂದು ಭಾರತೀಯ ಕಥೋಲಿಕ ಯುವ ಸಂಚಲನ ಮೂಡುಬಿದಿರೆ ವಲಯ ಹಾಗೂ ಪರಿಸರದ ಹಲವು ಪ್ರತಿಷ್ಠಿತ ಸಂಘಟನೆಗಳ ಸಹಯೋಗದಲ್ಲಿ ಮಾತೆ ಮರಿಯಮ್ಮನ ಜನ್ಮದಿನದ ಅಂಗವಾಗಿ ‘ಸರ್ವಧರ್ಮಿಯರೊಂದಿಗೆ ತೆನೆ ಹಬ್ಬ’ ಸುವರ್ಣ ಮಂದಿರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಗುರು ಒನಿಲ್ ಡಿಸೋಜ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ ಜಿ ಹಾಜರಿದ್ದರು, ಕಥೋಲಿಕ್ ಸಭಾ ಮೂಡುಬಿದಿರೆ ವಲಯದ ಅಧ್ಯಕ್ಷ ಶ್ರೀ ಅವಿಲ್ ಡಿಸೋಜ,ರೊಟರಾಕ್ಟ್ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷ ಫರಾಜ್, ರೋಟರಿ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷರು ರೊ.ನಾಗಾರಾಜ್ ಬಿ, ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ ಪರವಾಗಿ ರೊ.ಪೂರ್ಣಚಂದ್ರ, ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟಾವ್ನ್ ಅಧ್ಯಕ್ಷರು ಮಹೇಂದ್ರ,ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಅಧ್ಯಕ್ಷೆ ಅನ್ನ್ ಸರಿತಾ ಆಶೀರ್ವಾದ್, ಲಯನ್ಸ್ ಕ್ಲಬ್ ಮೂಡುಬಿದಿರೆ ಅಧ್ಯಕ್ಷರು ಲ.ಜೊಸ್ಸಿ ಮಿನೇಜಸ್, ಲಯನ್ಸ್ ಕ್ಲಬ್ ಅಲಂಗಾರು ಅಧ್ಯಕ್ಷರು ಲಾಯ್ಡ್ ರೇಗೊ, ಯುವ ಕೊಂಕಣಿ ಅಸೋಸಿಯೇಷನ್ ಇದರ ಅಧ್ಯಕ್ಷರು ಅನಿಷ್ ಡಿಸೋಜ,ಜೆ.ಸಿ.ಐ ತ್ರಿಭುವನ್ ಇದರ ಅಧ್ಯಕ್ಷರು ಸುನಿಲ್ ಕುಮಾರ್ ಹಾಗೂ ಐ.ಸಿ.ವೈ.ಎಮ್ ಮೂಡುಬಿದಿರೆ ವಲಯದ ಅಧ್ಯಕ್ಷ ಬ್ರೆಂಡನ್ ಕುಟಿನ್ಹ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 180 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು