ಮೂಡುಬಿದಿರೆ: ಸೆಪ್ಟೆಂಬರ್ 16 ರಂದು ಭಾರತೀಯ ಕಥೋಲಿಕ ಯುವ ಸಂಚಲನ ಮೂಡುಬಿದಿರೆ ವಲಯ ಹಾಗೂ ಪರಿಸರದ ಹಲವು ಪ್ರತಿಷ್ಠಿತ ಸಂಘಟನೆಗಳ ಸಹಯೋಗದಲ್ಲಿ ಮಾತೆ ಮರಿಯಮ್ಮನ ಜನ್ಮದಿನದ ಅಂಗವಾಗಿ ‘ಸರ್ವಧರ್ಮಿಯರೊಂದಿಗೆ ತೆನೆ ಹಬ್ಬ’ ಸುವರ್ಣ ಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಗುರು ಒನಿಲ್ ಡಿಸೋಜ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ ಜಿ ಹಾಜರಿದ್ದರು, ಕಥೋಲಿಕ್ ಸಭಾ ಮೂಡುಬಿದಿರೆ ವಲಯದ ಅಧ್ಯಕ್ಷ ಶ್ರೀ ಅವಿಲ್ ಡಿಸೋಜ,ರೊಟರಾಕ್ಟ್ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷ ಫರಾಜ್, ರೋಟರಿ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷರು ರೊ.ನಾಗಾರಾಜ್ ಬಿ, ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಪರವಾಗಿ ರೊ.ಪೂರ್ಣಚಂದ್ರ, ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟಾವ್ನ್ ಅಧ್ಯಕ್ಷರು ಮಹೇಂದ್ರ,ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಅಧ್ಯಕ್ಷೆ ಅನ್ನ್ ಸರಿತಾ ಆಶೀರ್ವಾದ್, ಲಯನ್ಸ್ ಕ್ಲಬ್ ಮೂಡುಬಿದಿರೆ ಅಧ್ಯಕ್ಷರು ಲ.ಜೊಸ್ಸಿ ಮಿನೇಜಸ್, ಲಯನ್ಸ್ ಕ್ಲಬ್ ಅಲಂಗಾರು ಅಧ್ಯಕ್ಷರು ಲಾಯ್ಡ್ ರೇಗೊ, ಯುವ ಕೊಂಕಣಿ ಅಸೋಸಿಯೇಷನ್ ಇದರ ಅಧ್ಯಕ್ಷರು ಅನಿಷ್ ಡಿಸೋಜ,ಜೆ.ಸಿ.ಐ ತ್ರಿಭುವನ್ ಇದರ ಅಧ್ಯಕ್ಷರು ಸುನಿಲ್ ಕುಮಾರ್ ಹಾಗೂ ಐ.ಸಿ.ವೈ.ಎಮ್ ಮೂಡುಬಿದಿರೆ ವಲಯದ ಅಧ್ಯಕ್ಷ ಬ್ರೆಂಡನ್ ಕುಟಿನ್ಹ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 180 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…
ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…