News Karnataka Kannada
Tuesday, April 30 2024
ಮಂಗಳೂರು

ಮಣಿಪುರದಲ್ಲಿ ಗಲಭೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರ ವಿಫಲ: ಕ್ರಿಶ್ಚಿಯನ್ ಕಮ್ಯುನಿಟಿ ಆಕ್ರೋಶ

New Delhi: Pakistan has instigated the Nuh violence
Photo Credit : IANS

ಮಂಗಳೂರು: ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ ನಡೆಯುತ್ತಿದ್ದು, ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಗಲಭೆ ಆರಂಭಗೊಂಡಿದೆ‌. ಪೋಲೀಸ್ ಠಾಣೆಯಿಂದ ಬಂಡುಕೋರರು ಪೋಲೀಸ್ ರೈಫಲ್ ಗಳನ್ನು ದೋಚಿದ ಘಟನೆ ನಡೆದಿದೆ.

ಮಣಿಪುರದಂತ ಪುಟ್ಟ ರಾಜ್ಯದಲ್ಲಿ ಇಷ್ಟೊಂದು ಗಂಭೀರ ಸ್ವರೂಪದ ಗಲಭೆಗಳು ಆಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ. 56 ಇಂಚಿನ ಎದೆ ಇರುವ ಪ್ರಧಾನಿ ಮೋದಿ ಹಾಗು ಗೃಹಸಚಿವ ಅಮಿತ್ ಶಾ ಗಲಭೆ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಮಣಿಪುರದಲ್ಲಿ ಕಳೆದ ವರ್ಷ ನಡೆದ ಚುನಾವಣಾ ರಾಲಿಯಲ್ಲಿ ಪ್ರಧಾನಿ ಮೋದಿ ಮಣಿಪುರದಲ್ಲಿ ಈ ಹಿಂದೆ ಇರುವಂತಹ ವ್ಯವಸ್ಥೆಯನ್ನು ಬದಲಿಸುವ ಅಗತ್ಯವಿದೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಈ ಬದಲಾವಣೆ ತರುವುದಾಗಿ ಹೇಳಿದ್ದರು.

ಅದೇ ರೀತಿಯ ಬದಲಾವಣೆ ಇದೀಗ ಮಣಿಪುರದಲ್ಲಿ ನಡೆಯುತ್ತಿದ್ದು, ಗಲಭೆಯ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಅವರು ಆರೋಪಿಸಿದರು. ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಿಸಬೇಕು, ಮಣಿಪುರದಲ್ಲಿ ಅಧಿಕಾರ ನಡೆಸುತ್ತಿರುವ ಸರಕಾರವನ್ನು ಅಮಾನತುಗೊಳಿಸಬೇಕೆಂದು ಅವರು ಒತ್ತಾಯಿಸಿದರು. ಮೌರೀಸ್ ಮಸ್ಕರೇನಸ್ ಪದಾಧಿಕಾರಿಗಳಾದ ವಲರೇಯನ್ ಡಯಾಸ್, ವಾಲ್ಟರ್ ಸೀಕ್ವೇರ, ವಿಕ್ಟರ್ ಪೈಸ್, ಜೆರೋಮಿಯಾಸ್ ಪೈಸ್, ಕಾನ್ಯೂಟ್ ಮಸ್ಕರೇನಿಯಸ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು