ಮಂಗಳೂರು

ಮಣಿಪುರದಲ್ಲಿ ಗಲಭೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರ ವಿಫಲ: ಕ್ರಿಶ್ಚಿಯನ್ ಕಮ್ಯುನಿಟಿ ಆಕ್ರೋಶ

ಮಂಗಳೂರು: ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ ನಡೆಯುತ್ತಿದ್ದು, ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಗಲಭೆ ಆರಂಭಗೊಂಡಿದೆ‌. ಪೋಲೀಸ್ ಠಾಣೆಯಿಂದ ಬಂಡುಕೋರರು ಪೋಲೀಸ್ ರೈಫಲ್ ಗಳನ್ನು ದೋಚಿದ ಘಟನೆ ನಡೆದಿದೆ.

ಮಣಿಪುರದಂತ ಪುಟ್ಟ ರಾಜ್ಯದಲ್ಲಿ ಇಷ್ಟೊಂದು ಗಂಭೀರ ಸ್ವರೂಪದ ಗಲಭೆಗಳು ಆಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ. 56 ಇಂಚಿನ ಎದೆ ಇರುವ ಪ್ರಧಾನಿ ಮೋದಿ ಹಾಗು ಗೃಹಸಚಿವ ಅಮಿತ್ ಶಾ ಗಲಭೆ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಮಣಿಪುರದಲ್ಲಿ ಕಳೆದ ವರ್ಷ ನಡೆದ ಚುನಾವಣಾ ರಾಲಿಯಲ್ಲಿ ಪ್ರಧಾನಿ ಮೋದಿ ಮಣಿಪುರದಲ್ಲಿ ಈ ಹಿಂದೆ ಇರುವಂತಹ ವ್ಯವಸ್ಥೆಯನ್ನು ಬದಲಿಸುವ ಅಗತ್ಯವಿದೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಈ ಬದಲಾವಣೆ ತರುವುದಾಗಿ ಹೇಳಿದ್ದರು.

ಅದೇ ರೀತಿಯ ಬದಲಾವಣೆ ಇದೀಗ ಮಣಿಪುರದಲ್ಲಿ ನಡೆಯುತ್ತಿದ್ದು, ಗಲಭೆಯ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಅವರು ಆರೋಪಿಸಿದರು. ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಿಸಬೇಕು, ಮಣಿಪುರದಲ್ಲಿ ಅಧಿಕಾರ ನಡೆಸುತ್ತಿರುವ ಸರಕಾರವನ್ನು ಅಮಾನತುಗೊಳಿಸಬೇಕೆಂದು ಅವರು ಒತ್ತಾಯಿಸಿದರು. ಮೌರೀಸ್ ಮಸ್ಕರೇನಸ್ ಪದಾಧಿಕಾರಿಗಳಾದ ವಲರೇಯನ್ ಡಯಾಸ್, ವಾಲ್ಟರ್ ಸೀಕ್ವೇರ, ವಿಕ್ಟರ್ ಪೈಸ್, ಜೆರೋಮಿಯಾಸ್ ಪೈಸ್, ಕಾನ್ಯೂಟ್ ಮಸ್ಕರೇನಿಯಸ್ ಉಪಸ್ಥಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago