ಮಂಗಳೂರು: ಏಪ್ರೀಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಕೆಲ ಜಿಲ್ಲೆಗಳಿಗೆ ಭೇಟಿ ನೀಡಲಿದ್ದರು ಆದರೆ ಇದೀಗ ಅವರ ಪ್ರವಾಸದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಬೃಹತ್ ಸಮಾವೇಶ ಮತ್ತು ಬೆಂಗಳೂರಿನಲ್ಲಿನಿಗದಿಯಾಗಿದ್ದ ರೋಡ್ ಶೋ ರದ್ದಾಗಿದೆ.
ಮೊದಲಿಗೆ ಮೋದಿ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ಸಮಾವೇಶದ ಬದಲಿಗೆ ಸುಮಾರು 2.5 ಕಿ.ಮೀ. ರೋಡ್ ಶೋ ಮಾತ್ರ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಏಪ್ರಿಲ್ 14ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಕೆಲ ಕಾರಣಾಂತರಗಳಿಂದ ಈ ಸಮಾವೇಶ ರದ್ದಾಗಿದ್ದು, ಸಮಾವೇಶದ ಬದಲು ಸುಮಾರು 2.5 ಕಿ.ಮೀ ರೋಡ್ ಶೋ ರೋಡ್ ಶೋ ನಡೆಸಲಿದ್ದು, ರೂಟ್ ಮ್ಯಾಪ್ ಸಹ ಸಿದ್ಧವಾಗಿದೆ.
ಏಪ್ರಿಲ್ 14ರಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ರೋಡ್ ಶೋ ಆರಂಭಿಸಲಿದ್ದಾರೆ.
ಏಪ್ರಿಲ್ 14ರ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೋದಿ ರೋಡ್ ಶೋ ಆರಂಭಿಸಲಿದ್ದಾರೆ. ಲೇಡಿಹಿಲ್ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ಸುಮಾರು 2.5 ಕೀ.ಮಿ ರೋಡ್ ಶೋ ನಡೆಯಲಿದೆ. ಲಾಲ್ಬಾಗ್, ಮಂಗಳೂರು ಪಾಲಿಕೆ ಕಚೇರಿ, ಬಳ್ಳಾಲ್ಬಾಗ್, ಎಂ.ಜಿ.ರಸ್ತೆ, PVS ವೃತ್ತ, ನವಭಾರತ ವೃತ್ತ, ಕೆ.ಎಸ್.ರಾವ್ ರಸ್ತೆ ಮೂಲಕ ಹಂಪನಕಟ್ಟೆ ಸಿಗ್ನಲ್ನಲ್ಲಿ ರೋಡ್ ಶೋ ಅಂತ್ಯವಾಗಲಿದೆ.