Categories: ಮಂಗಳೂರು

ಏಪ್ರೀಲ್‌ 14ರ ಮೋದಿ ಕರ್ನಾಟಕ ಪ್ರವಾಸದಲ್ಲಿ ಬದಲಾವಣೆ : ಎರಡು ಕಾರ್ಯಕ್ರಮಗಳು ರದ್ದು

ಮಂಗಳೂರು:   ಏಪ್ರೀಲ್‌ 14 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಕೆಲ ಜಿಲ್ಲೆಗಳಿಗೆ ಭೇಟಿ ನೀಡಲಿದ್ದರು ಆದರೆ ಇದೀಗ ಅವರ ಪ್ರವಾಸದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಬೃಹತ್ ಸಮಾವೇಶ ಮತ್ತು ಬೆಂಗಳೂರಿನಲ್ಲಿನಿಗದಿಯಾಗಿದ್ದ ರೋಡ್​ ಶೋ ರದ್ದಾಗಿದೆ.

ಮೊದಲಿಗೆ ಮೋದಿ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ಸಮಾವೇಶದ ಬದಲಿಗೆ ಸುಮಾರು 2.5 ಕಿ.ಮೀ. ರೋಡ್​ ಶೋ ಮಾತ್ರ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಏಪ್ರಿಲ್ 14ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಕೆಲ ಕಾರಣಾಂತರಗಳಿಂದ ಈ ಸಮಾವೇಶ ರದ್ದಾಗಿದ್ದು, ಸಮಾವೇಶದ ಬದಲು ಸುಮಾರು 2.5 ಕಿ.ಮೀ ರೋಡ್​ ಶೋ ರೋಡ್ ಶೋ ನಡೆಸಲಿದ್ದು, ರೂಟ್​ ಮ್ಯಾಪ್ ಸಹ ಸಿದ್ಧವಾಗಿದೆ.

ಏಪ್ರಿಲ್ 14ರಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ರೋಡ್​ ಶೋ ಆರಂಭಿಸಲಿದ್ದಾರೆ.

ಏಪ್ರಿಲ್ 14ರ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೋದಿ ರೋಡ್​ ಶೋ ಆರಂಭಿಸಲಿದ್ದಾರೆ. ಲೇಡಿಹಿಲ್ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ಸುಮಾರು 2.5 ಕೀ.ಮಿ ರೋಡ್ ಶೋ ನಡೆಯಲಿದೆ. ಲಾಲ್​ಬಾಗ್, ಮಂಗಳೂರು ಪಾಲಿಕೆ ಕಚೇರಿ, ಬಳ್ಳಾಲ್​ಬಾಗ್, ಎಂ.ಜಿ.ರಸ್ತೆ, PVS ವೃತ್ತ, ನವಭಾರತ ವೃತ್ತ, ಕೆ.ಎಸ್.ರಾವ್ ರಸ್ತೆ ಮೂಲಕ ಹಂಪನಕಟ್ಟೆ ಸಿಗ್ನಲ್​ನಲ್ಲಿ ರೋಡ್​ ಶೋ ಅಂತ್ಯವಾಗಲಿದೆ.

Nisarga K

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

2 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

3 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

28 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

45 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago