ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಭೇಟಿ ನೀಡಿದ್ದಾರೆ.
ನೇತ್ರಾವತಿ ಮತ್ತು ಕುಮಾರಧಾರಾ ನದಿ ನೀರನ ಮಟ್ಟ ಪರಿಶೀಲಿಸಿದ ಮುಖ್ಯಮಂತ್ರಿಗಳು ಪ್ರವಾಹದಿಂದ ಉಂಟಾದ ಬೆಳೆಹಾನಿ ಪರಿಶೀಲಿಸಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿಗಳಿಗೆ ನೆರೆ ಪರಿಸ್ಥಿತಿ ವಿವರಿಸಿದರು.
ನೆರೆ ನೀರಿನಿಂದಾಗಿ ಕಳೆದ ಒಂದು ವಾರದಿಂದ ಮುಳುಗಡೆಯಾಗಿರುವ ತೋಟಗಳನ್ನು ಮುಖ್ಯಮಂತ್ರಿ ವೀಕ್ಷಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ,ಸಿ.ಸಿ.ಪಾಟೀಲ, ಆರ್ ಆಶೋಕ್ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ್ದಾರೆ.
5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ ವಿತರಣೆ:
ಹಾಗೆ ಅವರು ಇಂದು ಬಂಟ್ವಾಳದಲ್ಲಿ ಮಣ್ಣು ಕುಸಿತದಿಂದ ಸಾವನ್ನಪ್ಪಿದ ಕೇರಳ ಮೂಲದ ಮೂವರು ವ್ಯಕ್ತಿಗಳ ವಾರಸುದಾರರಿಗೆ ತಲಾ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ಕನ್ನು ವಿತರಿಸಿದರು ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಸಚಿವ ಎಸ್ ಅಂಗಾರಾ ಮತ್ತು ಇತರರು ಉಪಸ್ಥಿತರಿದ್ದರು.