ಮಂಗಳೂರು: ಆರ್ ಎಸ್ ಎಸ್ ನ ದಕ್ಷಿಣ ಪ್ರಾಂತ ಶಕ್ತಿ ಕೇಂದ್ರ ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 76 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ, ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟಿಲೀನೊ ನೇತೃತ್ವದಲ್ಲಿ ಕ್ರೈಸ್ತ ಮುಖಂಡರು ಭಾಗಿಯಾದರು.
ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವದಲ್ಲಿ ಭೇಟಿ ನೀಡಿದ ಕ್ರೈಸ್ತ ಸಮದಾಯದ ಗಣ್ಯರು ಸಾಮರಸ್ಯ ಹಾಗೂ ಸೌಹಾರ್ದತೆಯ ಉದ್ದೇಶದಿಂದ ಆರ್ ಎಸ್ ಎಸ್ ನ ಗಣೇಶೋತ್ಸವದಲ್ಲಿ ಭಾಗಿಯಾಗಿ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಆರ್ ಎಸ್ ಎಸ್ ದಕ್ಷಿಣ ಪ್ರಾಂತ ಸರಸಂಘ ಚಾಲಕ ಡಾ ವಾಮನ್ ಶಣೈ ಅವರ ನೇತೃತ್ವದಲ್ಲಿ ಕ್ರೈಸ್ತ ಮುಖಂಡರನ್ನು ಆರ್ ಎಸ್ ಎಸ್ ಮುಖಂಡರು ಬರಮಾಡಿಕೊಂಡರು.