News Karnataka Kannada
Wednesday, May 08 2024
ಮಂಗಳೂರು

ಬೆಳ್ತಂಗಡಿ: ‘ಮಾದಕ ದ್ರವ್ಯ ಮುಕ್ತ ಕ್ಲಬ್’ ರಚನೆ ಮಾಡುವಂತೆ ಶಿಕ್ಷಣ ಇಲಾಖೆಗಳಿಗೆ ಸುತ್ತೋಲೆ

Education Center
Photo Credit : By Author

ಬೆಳ್ತಂಗಡಿ: ಒಬ್ಬ ವಿದ್ಯಾರ್ಥಿಯ ಭವಿಷ್ಯದ ಜೀವನಕ್ಕೆ ಶಿಕ್ಷಣ ಎಷ್ಟು ಮುಖ್ಯವೋ, ಆತನ ಉತ್ತಮ ನಡವಳಿಕೆ, ಒಳ್ಳೆಯ ಮಾತುಗಾರಿಕೆ, ದುಶ್ಚಟಮುಕ್ತ ಜೀವನ ಅಷ್ಟೇ ಮುಖ್ಯವಾಗಿರುತ್ತದೆ.

ತಂದೆ ತಾಯಿ ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸುತ್ತಾರೆ. ಮಕ್ಕಳು ಯಾವುದೇ ದುರಭ್ಯಾಸಕ್ಕೆ ಬಲಿಯಾಗದೆ ತಂದೆ ತಾಯಿಯ ಕನಸನ್ನು ಜಬಾಬ್ದಾರಿಯಿಂದ ಈಡೇರಿಸಲು ಪ್ರಯತ್ನಿಸಬೇಕು.

ಈ ನಿಟ್ಟಿನಲ್ಲಿ ಇಂದು ಸರಕಾರವೇ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮಗಳ ಅರಿವು ಮೂಡಿಸಲು ‘ಮಾದಕ ದ್ರವ್ಯ ಮುಕ್ತ ಕ್ಲಬ್’ ಹಾಗೂ ಸಮಿತಿ ರಚನೆ ಮಾಡುವಂತೆ ಮಾನ್ಯ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರವು ಶಿಕ್ಷಣ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹ ಎಂದು ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಆದುದರಿಂದ ವಿದ್ಯಾರ್ಥಿಗಳನ್ನು ಮತ್ತು ಯುವಜನತೆಯನ್ನು ದುಶ್ಚಟಗಳಿಂದ ಪಾರುಮಾಡಿ ‘ದುಶ್ಚಟಮುಕ್ತ ಸಮಾಜ – ಆರೋಗ್ಯವಂತ ಭಾರತ’ ವನ್ನು ರಚಿಸೋಣ ಎಂದು ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಮೂ. ಕೊರವಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್.ಮಂಜುನಾಥ್, ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾೈಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು