ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಸಮೇತರಾಗಿ ಆಗಮಿಸಿದರು. ಹೆಗ್ಗಡೆಯವರ ನಿವಾಸಕ್ಕೆ ಆಗಮಿಸಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.
ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಹೆಗ್ಗಡೆ ಸಹೋದರ ಹರ್ಷೇಂದ್ರ ಕುಮಾರ್ ಅವರನ್ನು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಸಿಎಂ, ಧರ್ಮಸ್ಥಳ, ಕುಕ್ಕೆ, ಸೋಮೇಶ್ವರಕ್ಕೆ ಆಗಾಗ್ಗೆ ಭೇಟಿ ಕೊಡುತ್ತೇನೆ. ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಬಂದು ಮಂಜುನಾಥನ ದರ್ಶನ ಪಡೆದಿದ್ದೇನೆ. ನಾಡಿನ ಸುಭಿಕ್ಷೆಗಾಗಿ ಪ್ರಾರ್ಥನೆ ಮಾಡಿದ್ದೇನೆ, ಸತ್ಯಕ್ಕೆ ಜಯವಾಗಲಿ ಎಂದು ಹೇಳಿದರು.
ಅಸಮಾಧಾನಗೊಂಡ ಎಲ್ಲರ ಬಳಿ ಮಾತನಾಡುತ್ತಿದ್ದೇನೆ. ಪಕ್ಷ ಅವರನ್ನು ಗೌರವದಿಂದ ಕಂಡು ಶಾಸಕರಾಗಿ ಮಾಡಿದೆ. ಅವರ ರಾಜಕೀಯ ಭವಿಷ್ಯ ಗೌರವ ಪೂರ್ವಕವಾಗಿ ಇರುವ ಹಾಗೆ ನಾನು ನೋಡಿಕೊಳ್ಳುತ್ತೇನೆ ಎಂದರು.
ಬಿಜೆಪಿಯವರು ವಿನಯ್ ಕುಲಕರ್ಣಿ ಟಾರ್ಗೆಟ್ ಮಾಡಿಲ್ಲ. ಎದುರಾಳಿ ಯಾರು ಅನ್ನೋದು ನನಗೂ ಮುಖ್ಯ, ನನ್ನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಎದುರಾಳಿ ಯಾರೇ ಇದ್ದರೂ ನನಗೆ ಚುನಾವಣೆ ಎದುರಿಸೋದು ಗೊತ್ತಿದೆ ಎಂದರು.
ಈಶ್ವರಪ್ಪ ರಾಜಕೀಯ ನಿವೃತ್ತಿ ಆಗಿಲ್ಲ, ಚುನಾವಣೆ ರಾಜಕೀಯದಲ್ಲಿ ಇರ್ತಾರೆ. ಅವರ ಜೊತೆಗೆ ವರಿಷ್ಠರು ಈಗಾಗಲೇ ಮಾತನಾಡಿದ್ದಾರೆ. ಸುಳ್ಯದ ಅಂಗಾರ ಬಹಳ ಜೆಂಟಲ್ ಮೆನ್ ರಾಜಕಾರಣಿ, ನಾನು ಅವರ ಜೊತೆ ಮಾತನಾಡುತ್ತೇನೆ. ಎರಡನೇ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆಯಾಗುತ್ತದೆ ಎಂದರು.