ಮಂಗಳೂರು: ವಿಧಾನ ಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಈ ಹಿನ್ನಲೆಯಲ್ಲಿ ಇಂದು ಕರಾವಳಿಯ ಪ್ರಸಿದ್ದ ಪುಣ್ಯ ಕ್ಷೇತ್ರಗಳಿಗೆ ಸಿ.ಎಂ. ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.
ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಬೊಮ್ಮಾಯಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ತಂಗಲಿರುವ ಸಿ.ಎಂ ಅವರು ನಾಳೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ದೇವಿಯ ದರ್ಶನ ಪಡೆದು ನಂತರ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.