News Karnataka Kannada
Monday, April 29 2024
ಮಂಗಳೂರು

ಕಾಫಿಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ಮಾಡಿಕೊಂಡಲ್ಲಿ ಮತ್ತೊಬ್ಬ ಉದ್ಯಮಿ ಆತ್ಮಹತ್ಯೆ

Whatsapp Image 2023 10 30 At 3.25.23 Pm
Photo Credit : News Kannada

ಉಳ್ಳಾಲ: ಕಾಫಿಡೇ ಮಾಲೀಕ ಸಿದ್ದಾರ್ಥ ಸಾವಿಗೆ ಶರಣಾದ ಸ್ಥಳದಲ್ಲಿಯೇ ಮತ್ತೊಬ್ಬ ಉದ್ಯಮಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.

ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ  ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ‌ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.

2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು