ಮಂಗಳೂರು: ರಸ್ತೆ ಅಫಘಾತವೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿ ಮತ್ತೆ ಇಬ್ಬರು ಗಾಯಗೊಂಡಿರುವ ಘಟನೆಯೊಂದು ನಗರದ ಹೊರವಲಯದ ಪಡೀಲ್ ಅಂಡರ್ ಪಾಸ್ ಬಳಿ ಗುರುವಾರದಂದು(ಸೆ.೧೪) ನಡೆದಿದೆ.
ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್(20) ಮೃತಪಟ್ಟಿರುವ ಯುವಕ. ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭವಿನ್ ರಾಜ್ ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಡೀಲ್ ಅಂಡರ್ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್ಪಾಸ್ ಫುಟ್ಪಾತ್ಗೆ ಡಿಕ್ಕಿ ಹೊಡೆದಿದೆ.
ಘಟನೆಯ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.