News Karnataka Kannada
Saturday, May 04 2024
ಮಂಗಳೂರು

ಎಲ್ಲಾ ವರ್ಗದ ಜನರಿಗೆ ಸೇವೆ ನೀಡಲು ಬದ್ಧ: ಇನಾಯತ್ ಅಲಿ

Committed to serve all sections of people: Inayat Ali
Photo Credit : News Kannada

ಮಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭಗೊಂಡಿವೆ, ಮುಂದಿನ ತಿಂಗಳಿನಿಂದ ಹಣ ಜಮಾ ಆಗಲಿದೆ. ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸಲು ಮಂಗಳೂರು ಉತ್ತರ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯೋನ್ಮುಖರಾಗಿದ್ದಾರೆ.

ಕ್ಷೇತ್ರದ ಪ್ರತಿ ವಲಯ ಮತ್ತು ವಾರ್ಡ್ ಮಟ್ಟದಲ್ಲಿ ಇಂದಿರಾ ಸೇವಾ ಕೇಂದ್ರವನ್ನು ಆರಂಭಿಸಿದ್ದೇವೆ. ಎಲ್ಲಾ ವರ್ಗದ ಜನರಿಗೆ ಪ್ರಾಮಾಣಿಕವಾಗಿ ಸೇವೆಯನ್ನು ತಲುಪಿಸಲು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.

ಗುರುಪುರ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ ಗ್ಯಾರಂಟಿ ಯೋಜನೆಗಳ ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶುಕ್ರವಾರ ಹಾಗೂ ಶನಿವಾರದಂದು ದೇರೆಬೈಲ್ ಕೋಡಿಕಲ್, ಮುಕ್ಕ, ನೀರುಮಾರ್ಗ, ಬಿತ್ತುಪಾದೆ, ಪಣಂಬೂರು, ಬೈಕಂಪಾಡಿಯಲ್ಲಿ ಇಂದಿರಾ ಸೇವಾ ಕೇಂದ್ರಕ್ಕೆ ಇನಾಯತ್ ಅಲಿ ಚಾಲನೆ ನೀಡಿದರು‌.

ಕಾರ್ಯಕ್ರಮದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಗಿರೀಶ್ ಆಳ್ವ, ಯಶವಂತ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ, ಕೃಷ್ಣ ಅಮೀನ್, ಸುನೀಲ್ ಗಂಜಿಮಠ, ಬಾಷ ಗುರುಪುರ, ಗಣೇಶ್ ಪೂಜಾರಿ, ಹರೀಶ್ ಭಂಡಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು