Categories: ಮಂಗಳೂರು

ಕಾಂಗ್ರೆಸ್‌ ಪ್ರತಿಭಟಿಸಿಲ್ಲ, ಜನರಿಗೆ ಸತ್ಯ ಗೊತ್ತಿದೆ: ಕಲ್ಲಡ್ಕ ಭಟ್‌ಗೆ ಮುತಾಲಿಕ್‌ ಟಾಂಗ್‌

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದ್ದು ಸಂತ್ರಸ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸರ ಥರ್ಡ್ ಡಿಗ್ರಿ ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಘಟನೆಯನ್ನ ಉಗ್ರವಾಗಿ ಖಂಡಿಸುತ್ತೇನೆ ಎಂದರು. ಪ್ರಕರಣದ ಮೂಲ‌ ವ್ಯಕ್ತಿ ಡಿವೈಎಸ್ಪಿ, ಅವರನ್ನ ಸಸ್ಪೆಂಡ್ ಮಾಡಬೇಕು. ಹಾಗಾಗಿ‌ ಹೊಸ ಸರ್ಕಾರದ ಗೃಹಮಂತ್ರಿಗಳಿಗೆ ಶ್ರೀರಾಮ ಸೇನೆ ಪುತ್ತೂರಿನ ಘಟನೆ ವಿರುದ್ಧ ಮನವಿ ನೀಡಲಾಗುವುದು. ಘಟನೆಗೆ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಕಾಂಗ್ರೆಸ್ ಮೇಲೆ ಆರೋಪ ಹೊರಿಸಿದ ವಿಚಾರವಾಗಿ ಮಾತನಾಡಿದ ಅವರು ಪುತ್ತೂರಿನಲ್ಲಿ ನಡೆದ ಈ ಘಟನೆ ಕುರಿತು ಕಾಂಗ್ರೆಸ್ ಮೇಲೆ ಆರೋಪ ಮಾಡುವುದು ತಪ್ಪು. ಪ್ರಭಾಕರ್ ಭಟ್ ಅವರ ಮಾತು ಒಪ್ಪುವಂತಹುದಲ್ಲ. ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ಶಾಸಕರು ಹಿಂದು ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅವರೇ ಪ್ರತಿಭಟನೆಯಲ್ಲಿ ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದಾರೆ.

ಕಾಂಗ್ರೆಸ್‌ ಪ್ರತಿಭಟನೆ ನಡೆಸಿಲ್ಲ. ಈ ಪ್ರಕರಣವನ್ನ ಮುಚ್ಚಿ ಹಾಕುವಂತಹ ಕೆಲಸ ಮಾಡಬೇಡಿ ಎಂದರು. ತಪ್ಪನ್ನು ಒಪ್ಪಿಕೊಂಡು ಸರಿಪಡಿಸುವ ಕೆಲಸ ಮಾಡಿ ಎಂದರು. ಜನರಿಗೆ ಸತ್ಯ‌ಗೊತ್ತಿದೆ, ಇನ್ನೇನೋ ಹೇಳುವುದಕ್ಕೆ ಹೋಗಿ ಮತ್ತೆ ಅಪಹಾಸ್ಯಕ್ಕೀಡಾಗಬೇಡಿ ಎಂದರು. ದೌರ್ಜನ್ಯಕ್ಕೊಳಗಾದ ಯುವಕರು ಬಾಲ್ಯದಿಂದಲೇ ಸ್ವಯಂ ಸೇವಕರು. ಹಿಂದುತ್ವಕ್ಕಾಗಿ ಯಾವುದೇ ಕಾರ್ಯಕ್ಕೆ ಸಿದ್ಧವಾದಂತಹ ಕಾರ್ಯಕರ್ತರು. ಅಂತಹ ವ್ಯಕ್ತಿಗಳ ಮೇಲೇ ಬ್ರಿಟಿಷ್‌ ಮಾದರಿ ಕ್ರೌರ್ಯ ಮೆರೆದಿದ್ದು ತಪ್ಪು. ಅಷ್ಟಕ್ಕೂ ಕಾರ್ಯಕರ್ತರು ಮಾಡಿದ ತಪ್ಪಾದರೂ ಏನು ಎಂದು ಪ್ರಶ್ನಿಸಿದರು. ಚಪ್ಪಲಿ ಹಾರ ಬ್ಯಾನರ್ ಹಾಕಿದ್ದಾರೆ ಎಂಬುದು ಅಪರಾಧವಾದವೇ ? ಸಾರ್ವಜನಿಕ ಜೀವನದಲ್ಲಿರುವಾಗ ಹೂವಿನ ಹಾರ ಹಾಕಿಕೊಳ್ಳಲು ಸಿದ್ಧರಿರುವಂತೆಯೇ ಚಪ್ಪಲಿ ಹಾರ ಹಾಕಿಸಿಕೊಳ್ಳಲು ಸಿದ್ಧರಿರಬೇಕು. ಮಾನ, ಅಪಮಾನ, ಸನ್ಮಾನವನ್ನು ಸಮನಾಗಿ ಸ್ವೀಕರಿಸಬೇಕು ಎಂದರು. ಯಾಕೇ ಬ್ಯಾನರ್ ಚಪ್ಪಲಿ ಹಾರ ಹಾಕಿದ್ದಾರೇ ಎಂಬ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು ಎಂದರು. ಅದು‌ ಬಿಟ್ಟು ಕಾರ್ಯಕರ್ತರ ಮೇಲೆ‌ ಮಾಡಿಸಿದ ದೌರ್ಜನ್ಯಕ್ಕೆ ಕ್ಷಮೆ‌ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Umesha HS

Recent Posts

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದಿದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದು ತಿಳಿಹೇಳಿದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ…

22 mins ago

ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ; ರಾಮಲಲ್ಲಾನ ದರ್ಶನ, ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್​ ಶೋ…

26 mins ago

ದಾಖಲೆಗಳ ಸರದಾರ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ…

41 mins ago

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಕಾರು ಭೀಕರ ಅಪಘಾತ : ಆಸ್ಪತ್ರಗೆ ದಾಖಲು

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯ ಕಾರು ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಶಿವಕುಮಾರ ಸ್ವಾಮೀಜಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಮೂಲಕ ಸ್ವಾಮೀಜಿಯನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

47 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಗಂಡು ಹುಲಿ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11…

1 hour ago

ಅತ್ಯಾಚಾರ ಆರೋಪ; ಎಸ್‌ಐಟಿ ವಿಚಾರಣೆಗೆ ಸಹಕರಿಸದ ಹೆಚ್​ಡಿ ರೇವಣ್ಣ

ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣರನ್ನು ಕಳೆದ ದಿನ ಎಸ್​ಐಟಿ…

1 hour ago