ಮಂಗಳೂರು: ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿ ಕೇಂದ್ರ ಬಿಜೆಪಿ ಸರ್ಕಾರ ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಂಗಳೂರು ನಗರದ ಕ್ಲಾಕ್ ಟಾವರ್ ಸರ್ಕಲ್ನಲ್ಲಿ ಊಟದ ತಟ್ಟೆಗಳನ್ನು ಹಿಡಿದುಕೊಂಡು ತಟ್ಟೆ ಬಡಿಯುತ್ತಾ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ಬಿಜೆಪಿ ಯವರು ಪ್ರತಿಭಟಿಸಿದ್ದರು, ನನ್ನ ವಿರುದ್ಧ ಅನ್ನದ ಬಟ್ಟಲು ತಟ್ಟಿ ಪ್ರತಿಭಟಿಸಿದ್ರು, ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ವಿ. ನಾನು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು. ಈಗ ನಮ್ಮ ಸರಕಾರದ ಅನ್ನ ಭಾಗ್ಯ ಯೋಜನೆಗೆ ವಿರೋಧ ಮಾಡಲಾಗಿದೆ, ಕೇಂದ್ರ ಸರಕಾರ ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ, ನಮಗೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ,
ನಮ್ಮ ಸರಕಾರವನ್ನ ಇಕ್ಕಟ್ಟಿಗೆ ಸಿಲುಕಿಸಬೇಕೆಂದೆ ಈ ರೀತಿ ಮಾಡಲಾಗಿದೆ, ಯಡಿಯೂರಪ್ಪ ನೇತೃತ್ವದ ಸತಕಾರ ಶಾಲಾ ಮಕ್ಕಳಿಗೆ ಸೈಕಲ್ ನೀಡಿತ್ತು ಅದರೆ ಒಂದು ವರ್ಷದಲ್ಲಿ ಸೈಕಲ್ ಮೂಲೆ ಸೇರಿತ್ತು, ಬಿಜೆಪಿ ಸರಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್, ಬಿಜೆಪಿ ನಾಯಕರು ನೀಡಿದ್ದ ಭರವಸೆಯನ್ನು ಈ ವರೆಗೆ ಈಡೆರಿಸಲು ಸಾದ್ಯವಾಗಿಲ್ಲ, ಹೋರ ದೇಶದಲ್ಲಿರುವ ಕಪ್ಪು ಹಣವನ್ನು ಈ ವರೆಗೂ ತರಲು ಇವರಿಗೆ ಸಾಧಯವಾಗಿಲ್ಲ, ಈ ಬಿಜೆಪಿ ನಾಯಕರು ಆತ್ಮಹತ್ಯೆ ಮಡಿಕೊಳ್ಳ ಬೇಕು, ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು.