Categories: ಮಂಗಳೂರು

ಕರಾವಳಿಯಲ್ಲಿ ಕಾಂಗ್ರೆಸ್ 10 ಸೀಟ್ ಗೆಲ್ಲುತ್ತೆ- ಡಿ.ಕೆ. ಶಿವಕುಮಾರ್

ಕೊಲ್ಲೂರು: ಕರಾವಳಿ ಭಾಗದಲ್ಲಿ ಕಾಂಗ್ರೆಸ್ 10 ಸೀಟ್ ಗೆಲ್ಲುತ್ತದೆ. ಬಿಜೆಪಿಗೆ ಹಿಂದುತ್ವ ಫಲ ಕೊಡಲ್ಲ. ನಾವು ಬದುಕಿನ ಬಗ್ಗೆ ಮಾತನಾಡುತ್ತೇವೆ, ಅವರು ಭಾವನೆ ಬಗ್ಗೆ ಮಾತಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಕೊಲ್ಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೇ ಒಳ್ಳೆಯ ಕೆಲಸ, ಹೋರಾಟ, ಯುದ್ಧ ಮಾಡಬೇಕಾದರೆ ದೇವರ ಅನುಗ್ರಹ ಮುಖ್ಯ.ದೇವರ ಅನುಗ್ರಹ ಇಲ್ಲದೇ ಏನೂ ಆಗುವುದಿಲ್ಲ. ಕೊಲ್ಲೂರು ಮೂಕಾಂಬಿಕೆ, ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಬೇಕು ಅಂತ ಬಂದಿದ್ದೇನೆ ಎಂದರು.

ಜನರು ಕೇಸರಿಶಾಲು ಹಾಕಿ ಬಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕು ಎಂಬುದು ಅವರ ಆಸೆ. ಮುಂದೆ ರಾಹುಲ್ ಗಾಂಧಿ ಜಿಲ್ಲೆಗೆ ಬರುತ್ತಾರೆ ಎಂದು ಹೇಳಿದರು.

ಸಿಎಂ ಹುದ್ದೆಗೆ ಕಾಂಗ್ರೆಸ್ ನಲ್ಲಿ ಪೈಪೋಟಿ ವಿಚಾರಕ್ಕೆ ಮಾತನಾಡಿದ ಅವರು, ನಾವು ರಾಜಕಾರಣಿಗಳು, ಖಾವಿ ಹಾಕ್ಕೊಂಡಿಲ್ಲ. ಬಿಳಿ ಬಟ್ಟೆ ಹಾಕ್ಕೊಂಡಿದ್ದೇವೆ ಎಂದರು.

ಸಿದ್ದರಾಮಯ್ಯ ಅವರ ಲಿಂಗಾಯತ ಭ್ರಷ್ಟ ಸಿಎಂ ಹೇಳಿಕೆ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಬಿಜೆಪಿ ಅವಧಿಯಲ್ಲಿ‌ ಭ್ರಷ್ಟಾಚಾರ ನಡೆದಿದೆ ಅಂದಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ, ನೆಹರೂ ಓಲೇಕಾರ್ ಅದನ್ನೇ ಹೇಳಿದ್ದಾರೆ. ಆದ್ರೆ, ಬಿಜೆಪಿ ಸುಮ್ಮನೆ ಈ ವಿಚಾರದಲ್ಲಿ ಸಮುದಾಯವನ್ನು ಎಳೆದು ತರುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago