News Karnataka Kannada
Sunday, April 28 2024
ಮಂಗಳೂರು

ಗುರುಪುರ ಮಠದ ಬಳಿಯ ಎಸ್‌ಸಿ-ಎಸ್‌ಟಿ ಕಾಲೊನಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಗುದ್ದಲಿಪೂಜೆ

Construction of 'Sabha Bhavan' at SC-ST Colony near Gurupura Mutt. Bharath Shetty Guddali Pooja
Photo Credit : News Kannada

ಗುರುಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಂಟಿ ಕಾಲೊನಿಯಲ್ಲಿ ನೂತನ `ಸಭಾಭವನ’ ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಮಾಧ್ಯಮದೊಂದಿಗೆ ಶಾಸಕರು ಮಾತನಾಡಿ, ಇದು 12 ಲಕ್ಷ ರೂ ಅನುದಾನದ ಕಾಮಗಾರಿಯಾಗಿದ್ದು, ಸಭಾಭವನ ರಚನೆಗೆ ಅಗತ್ಯವಿರುವ ಉಳಿಕೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಾಲೊನಿ ಮಂದಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಅಧಿಕಾರಿಗಳು, ಸ್ಥಳೀಯ ಭಾಗದ ಪಕ್ಷದ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು