News Karnataka Kannada
Thursday, May 02 2024
ಮಂಗಳೂರು

ಎಂಆರ್‌ ಪಿಎಲ್‌ ವತಿಯಿಂದ ಅಡುಗೆ ತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ

Cooking Waste Management Information Programme by MRPL
Photo Credit : News Kannada

ಮಂಗಳೂರು: ಬಜ್ಪೆ ಗ್ರಾಮ ಪಂಚಾಯತ್ ನಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಎಂಆರ್‌ ಪಿಎಲ್‌ (MRPL) ವತಿಯಿಂದ ಅಡುಗೆ ತ್ಯಾಜ್ಯ ನಿರ್ವಹಣೆ ಮತ್ತು ಪೈಪ್‌ ಕಾಂಪೋಸ್ಟಿಂಗ್ ಕಾರ್ಯಕ್ರಮವನ್ನು ಜುಲೈ 5ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಬಜ್ಪೆ ಪಟ್ಟಣ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ಪೂರ್ಣಕಲಾ ಉದ್ಘಾಟಿಸಿದರು. ಬಜ್ಪೆ ರೋಟರಿ ಕ್ಲಬ್ ಅಧ್ಯಕ್ಷರಾದ ಶೇಖರ್ ಶೆಟ್ಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಾದ ಕೆ ನಾಗರಾಜ ರಾವ್ ಮತ್ತು ಸ್ಟೀವನ್ ಪಿಂಟೋ ಉಪಸ್ಥಿತರಿದ್ದರು.

ಮಂಗಳೂರಿನ ರಾಮಕೃಷ್ಣಮಠದ ರಂಜನ್ ಬೆಳ್ಳರ್ಪಾಡಿ ಅವರು ಪಾಟ್ ಕಾಂಪೋಸ್ಟ್ ವಿಧಾನವನ್ನು ಪ್ರಸ್ತುತಪಡಿಸಿದರು ಮತ್ತು ಅಡುಗೆಮನೆ ತ್ಯಾಜ್ಯ ನಿರ್ವಹಣೆಯ ವಿಧಾನಗಳನ್ನು ವಿವರಿಸಿದರು.

ಪೈಪ್ ಕಾಂಪೋಸ್ಟಿಂಗ್ ವಿಧಾನ ಕುರಿತು ವಿವರಿಸಿದರು. ಕಿಚನ್ ವೇಸ್ಟ್‌ ಅನ್ನು ಸಸ್ಯಗಳಿಗೆ ಹೇಗೆ ಗೊಬ್ಬರವಾಗಿ ಬಳಸಬಹುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಧಾರಾಕಾರ ಮಳೆಯ ನಡುವೆಯೂ 48 ಮಂದಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು. ಎಂಆರ್‌ಪಿಎಲ್‌ನ ಸ್ವಚ್ಛತಾ ಆಂದೋಲನ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು