Categories: ಮಂಗಳೂರು

ನ್ಯೂಸ್‌ ಕರ್ನಾಟಕ ಸಂಸ್ಥೆಯ 4 ನೇ ಕ್ರಿಸ್‌ ಮಸ್‌ ಕರೋಲ್‌ ಸ್ಪರ್ಧೆಗೆ ಕ್ಷಣಗಣನೆ

ಮಂಗಳೂರು: ನ್ಯೂಸ್‌ ಕರ್ನಾಟಕ ಮಾಧ್ಯಮ ಸಂಸ್ಥೆ ಸಹಯೋಗದಲ್ಲಿ ಕ್ರಿಸ್‌ಮಸ್ ಕರೋಲ್ ಸ್ಪರ್ಧೆಯ 4ನೇ ಆವೃತ್ತಿಯು ಡಿಸೆಂಬರ್ 15 ರಂದು ಪ್ರಾರಂಭವಾಗಲಿದ್ದು ವಿಭಿನ್ನ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.

ಕ್ರಿಸ್‌ಮಸ್ ಕರೋಲ್ಸ್ ಕಾರ್ಯಕ್ರಮಕ್ಕೆ ತೀರ್ಪುಗಾರರರಾಗಿ ಅಲಿಸ್ಟರ್ ಲಸ್ರಾದೋ, ಜಾಸ್ಮಿನ್ ಡಿಸೋಜಾ, ಜೀವನ್ ಲೋಬೋ ಪಾಲ್ಗೊಳ್ಳಲಿದ್ದಾರೆ.

ಜಸ್ಟ್‌ರೋಲ್‌ಫಿಲ್ಮ್ಸ್‌ನ ಮ್ಯಾನೇಜಿಂಗ್ ಪಾರ್ಟ್‌ನರ್ ಅಲಿಸ್ಟರ್ ಲಾಸ್ರಾದೊ ಅವರು ಗಾಯನ ಸ್ಪರ್ಧೆಯ ಹಲವು ತಂಡಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿದ್ದಾರೆ. ಬಹುಮುಖ ಪ್ರತಿಭೆಯ ಲಾಸ್ರಾದೊ ಅವರು ಸೇಂಟ್ ಅಲೋಶಿಯಸ್ ಗೊನ್ಜಾಗಾ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬ್ಯಾಂಡ್ ಡೆಸಿಬಲ್ಸ್‌ನ ಬ್ಯಾಂಡ್ ಮ್ಯಾನೇಜರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಆನ್‌ಲೈನ್ ಮತ್ತು ಆಫ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಜಾಗತಿಕವಾಗಿ 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪ್ರತಿಭಾ ಪೋಷಣೆಗೆ ಪ್ರೇರಣೆಯಾಗಿದ್ದಾರೆ.

ಅದೇ ರೀತಿ ಆಯ್ಕೆ ಸಮಿತಿಯಲ್ಲಿ ಅಲೋಶಿಯಸ್ ಮತ್ತು ಕಾರ್ಮೆಲ್ ಶಾಲೆಯ ಸಂಗೀತ ಶಿಕ್ಷಕಿ ಜಾಸ್ಮಿನ್ ಡಿಸೋಜಾ ಕೂಡ ಸಮಿತಿಗೆ ಸೇರಿದ್ದಾರೆ. ಅಬುಧಾಬಿಯ ಸಂಗೀತ ಶಿಕ್ಷಕರಾದ ಜೀವನ್ ಲೋಬೋ ಕೂಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಿರೂಪಕರಾಗಿ ಶಿಕ್ಷಣತಜ್ಞರಾದ ರೋಶನ್ ರಾಜ್ ಕಾರ್ಯನಿರ್ವಹಿಸಲಿದ್ದಾರೆ.

ಆನೇಕಲ್, ಮಂಗಳೂರು, ಹರಿಹರ, ಅತ್ತಾವರ, ಧಾರವಾಡ, ಒಡಿಶಾ ಮತ್ತು ಟೆಲ್ ಅವಿವ್, ಇಸ್ರೇಲ್‌ ಸೇರಿದಂತೆ ಜಗತ್ತಿನ ಎಲ್ಲ ಪ್ರದೇಶದ ಜನರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿದ್ದಾರೆ. ಆ ಮೂಲಕವಾಗಿ ಎಲ್ಲ ಸಮುದಾಯಗಳು ಭೌಗೋಳಿಕ ವೈವಿಧ್ಯವನ್ನು ಮೀರಿ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿದ್ದಾರೆ.

Ashika S

Recent Posts

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

22 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

41 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

54 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago