ಕಡಬ: ತಾಲೂಕಿನ ಕೊಯಿಲ ಗ್ರಾಮದಲ್ಲಿ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿದ್ದು, ಪರಿಸರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತಿದೆ. ಗೋಳಿತ್ತಡ- ಏಣಿತಡ್ಕ ರಸ್ತೆಯ ತ್ರಿವೇಣಿ ಸರ್ಕಲ್ ಬಳಿ ದನದ ಕಾಲಿನ ಎಲುಬು ಮಂಗಳವಾರ ಪತ್ತೆಯಾಗಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವುದಕ್ಕೆ ಪುಷ್ಠಿ ನೀಡಿದೆ.
ಗ್ರಾಮದ ಕುದುಳೂರು, ಕೊರೆಪದವು, ಕಲಾಯಿ, ಕೊಯಿಲ ಗೇಟ್ ಬಳಿ, ಜನತಾ ಕಾಲೋನಿ, ಆತೂರು ಬೈಲು, ಪೂರಿಂಗ ಮುಂತಾದೆಡೆ ಅಕ್ರಮ ಕಸಾಯಿಖಾನೆಗಳು ಕಾಯಾಚರಿಸುತ್ತಿದ್ದು, ಅಕ್ರಮವಾಗಿ ಗೋವಧೆ ನಿರಂತರವಾಗಿ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ರಾತ್ರೋ ರಾತ್ರಿ ಗೋವುಗಳನ್ನು ತಂದು ವಧೆ ಮಾಡಿ ಮಾಂಸ ಮಾಡಿ ಬೆಳಗಾಗುವುದರೊಳಗೆ ಹದ ಮಾಡಿದ ಮಾಂಸಗಳನ್ನು ನಿಗದಿತ ಪ್ರದೇಶಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೆಲವು ಅಕ್ರಮ ಕೇಂದ್ರಗಳಲ್ಲಿನ ಗೋವಿನ ತ್ಯಾಜ್ಯಗಳನ್ನು ಹತ್ತಿರದ ಕುಮಾರಧಾರ ನದಿಗೆ ಎಸೆಯಲಾಗುತ್ತಿದ್ದು ಅಲ್ಲಿ ಮೊಸಲೆಗಳಿಗೆ ಆಹಾರವಾಗುತ್ತಿದೆ. ಇದರಿಂದಾಗಿ ನದಿಯಲ್ಲಿ ಮೊಸಳೆಗಳ ಸಂಖ್ಯೆ ಅಧಿಕವಾಗುತ್ತಿದ್ದು ಸ್ಥಳೀಯ ಜನ ಆತಂಕದಲ್ಲಿ ಬದುಕುವಂತಾಗಿದೆ ಎಂದು ಹೇಳಲಾಗಿದೆ, ಇನ್ನು ಕೆಲವು ಅಕ್ರಮ ಕೇಂದ್ರಗಳಲ್ಲಿ ತ್ಯಾಜ್ಯಗಳನ್ನು ಹತ್ತಿರದ ಗುಡ್ಡ, ಬಯಲು ಪ್ರದೆಶ, ತೋಡು, ಕಾಡು ಪ್ರದೇಶಗಳಲ್ಲಿ ಎಸೆಯಲಾಗುತ್ತದೆ. ಇವುಗಳನ್ನು ನಾಯಿಗಳು ಎಲ್ಲೆಂದರಲ್ಲಿ ಹೊತ್ತುಕೊಂಡು ಹೋಗಿ ಪರಿಸರದ ತುಂಬೆಲ್ಲಾ ಹರಡುತ್ತವೆ. ಇದರ ಪರಿಣಾಮ ಈಗ ನೂರಾರು ವಾಹನ ಸಂಚರಿಸುವ ರಸ್ತೆಯಲ್ಲಿ ದನದ ಎಲುಬು ಕಾಣ ಸಿಗುವಂತಾಗಿದೆ. ಎರಡು ವರ್ಷದ ಹಿಂದೆ ಕುದುಳೂರು ಬಳಿಯ ಪದವು ಪರಂಗಾಜೆ ಕ್ರಾಸ್ ಬಳಿ ಗೋವಿನ ಎಲುಬು ಹಾಗು ತ್ಯಾಜ್ಯಗನ್ನು ಎಸೆಯಲಾಗಿತ್ತು. ಇದೀಗ ಮತ್ತೆ ರಸ್ತೆಯಲ್ಲಿ ಎಲುಬು ಕಾಣಿಸಿಕೊಂಡು ಹಿಂದೂ ಸಂಘಟನೆಗಳ ಅಕ್ರೋಶಕ್ಕೆ ಕಾರಣವಾಗಿದೆ.
ಕಾಡು ಹಂದಿಗಳ ಕಾಟ; ಗೋವಿನ ಮಾಂಸ ಮಾಡಿ ಉಳಿಯುವ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಪೊದೆಗಳ ಮಧ್ಯೆ ಎಸೆಯುವುದರಿಂದ ಅಲ್ಲಿಗೆ ಕಾಡು ಹಂದಿಗಳು ಬಂದು ತಿನ್ನತೊಡಗುತ್ತವೆ. ಮೊದಲೆ ಕಾಡುಹಂದಿಗಳಿಗೆ ಆಹಾರದ ಅಭಾವ ಇದ್ದು ಗೋವಿನ ಮಾಂಸದ ತ್ಯಾಜ್ಯ ಅವುಗಳಿಗೆ ಮೃಷ್ಠಾನ್ನವಾಗುತ್ತಿದೆ. ಇದರಿಂದಾಗಿ ಕೊಯಿಲ ಪ್ರದೇಶಗಳಲ್ಲಿ ಕಾಡು ಹಂದಿಗಳ ಸಂಖ್ಯೆ ದಿನದಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಾಡು ಹಂದಿಗಳು ಹೆಚ್ಚು ಹೆಚ್ಚಾಗಿ ರೈತರ ತೋಟಗಳಿಗೆ ದಾಂಗುಡಿ ಇಡುತ್ತಿವೆ. ಕೃಷಿ ನಾಶ ಮಾಡಿ ಅಟ್ಟಹಾಸ ಮೆರೆಯುತ್ತಿವೆ. ರೈತಾಪಿ ವರ್ಗ ಕಾಡುಹಂದಿಗಳ ಕಾಟದಿಂದ ಹೈರಾಣರಾಗಿದ್ದಾರೆ. ಸಂಬಂಧಪಟ್ಟವರು ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಅಕ್ರಮಗೋವಧೆ ತಡೆಯಬೇಕು ಎಂದು ಹಿಂದೂ ಸಂಘಟನೆಗಳ ಪ್ರಮುಖರು ಅಗ್ರಹಿಸುತ್ತಿದ್ದಾರೆ.
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…