News Karnataka Kannada
Monday, April 29 2024
ಮಂಗಳೂರು

ಮಂಗಳೂರು: ದನಕಳ್ಳತನ ಪ್ರಕರಣ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Mangaluru
Photo Credit : News Kannada

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್ ಕಬೀರ್ ಪಾರಿವಾಳ ಕಬೀರ್ 35ವರ್ಷ ನನ್ನು ನಗರದ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ.

ಕರ್ತವ್ಯಕ್ಕೆ ಅಡ್ಡಿ , ಆರೋಪಿ ಕಬೀರ್ ದನ ಕಳವು ಪ್ರಕರಣದಲ್ಲಿ ಭಾಗಿಯಾಗಿ ಬಂಧನವಾದ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ . ಈತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದ ಸಮಯ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದರು.

ಆದರೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ,ಬಂದರು , ಕಂಕನಾಡಿ ನಗರ ,ಉಳ್ಳಾಲ ,ಪಣಂಬೂರು ,ಬಜ್ಪೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ ಸೇರಿದಂತೆ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿವೆ .ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 7ತಿಂಗಳಿಂದ ತಲೆ ಮರೆಸಿಕೊಂಡಿದ್ದನು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು